Categories: CrimeLatest

ಕೋರ್ಟ್ ತಡೆಯಾಜ್ಞೆ ಇಲ್ಲದಿದ್ದರೂ ರಸ್ತೆ ಬಂದ್ ಮಾಡುವ ಪ್ರಯತ್ನ? ಅಂಕೋಲ ತಾಲೂಕಿನ ಹೊನ್ನೆಬೈಲ್‌ನಲ್ಲಿ ಮೂವರ ವಿರುದ್ಧ FIR ದಾಖಲು.

ಅಂಕೋಲಾ ತಾಲೂಕಿನ ಹೊನ್ನೆಬೈಲ್ ಗ್ರಾಮದ ಸರ್ವೇ ನಂ. 214/5ರ ಸಾರ್ವಜನಿಕ ರಸ್ತೆ ವಿವಾದ ಇದೀಗ ತಾರಕಕ್ಕೇರಿದ್ದು, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸಿ ದೂರುದಾರರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜಮೀನಿನ ಮಾಲೀಕರಾದ ಮಂಗಲಾ ಮೋಹನ್ ನಾಯ್ಕ್, ಅವರ ಮಗ ಅಮರ್ ಮೋಹನ್ ನಾಯ್ಕ್ ಹಾಗೂ ತಂಗಿ ಲಕ್ಷ್ಮಿ ಮೋನಪ್ಪ ನಾಯ್ಕ್ ಎಂಬುವವರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನ್ಯ ಜೆ.ಎಮ್.ಎಫ್.ಸಿ ಅಂಕೋಲಾ ನ್ಯಾಯಾಲಯದ ಪಿಸಿಆರ್. ನಂ. 180/2026ರ ಆದೇಶದ ಅನ್ವಯ ಪೊಲೀಸರು ಈ ತನಿಖೆ ಕೈಗೊಂಡಿದ್ದಾರೆ. ಹೊನ್ನೆಬೈಲ್ ಗ್ರಾಮದ ನಿವಾಸಿ ಕೃಷ್ಣ ನಾಗಪ್ಪ ನಾಯ್ಕ್ ಸೇರಿದಂತೆ ಸ್ಥಳೀಯ ಸಾರ್ವಜನಿಕರು ಅನಾದಿಕಾಲದಿಂದಲೂ ಓಡಾಡುತ್ತಿದ್ದ ರಸ್ತೆಗೆ, ಜಮೀನಿನ ಮಾಲೀಕರು ಕಳೆದ 3-4 ವರ್ಷಗಳಿಂದ ನಿರಂತರವಾಗಿ ಅಡ್ಡಿಪಡಿಸುತ್ತಾ ಬಂದಿದ್ದರು. ಈ ಹಿಂದೆ 2024 ರಲ್ಲಿ ಜಮೀನಿನ ಮಾಲೀಕರು ಏಕಾಏಕಿ ರಸ್ತೆಗೆ ಕೆಂಪು ಕಲ್ಲುಗಳನ್ನು ಸುರಿದು ಸಾರ್ವಜನಿಕರ ಸಂಚಾರವನ್ನು ಬಂದ್ ಮಾಡಿದಾಗ, ಏಕೈಕ ರಸ್ತೆಯನ್ನು ನಂಬಿಕೊಂಡಿರುವ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ್ದರು.. ಅಂದು ಸ್ಥಳಕ್ಕೆ ಧಾವಿಸಿದ್ದ ತಹಶೀಲ್ದಾರರು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಲ್ಲುಗಳನ್ನು ತೆರವುಗೊಳಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಈ ಬೆಳವಣಿಗೆಯಿಂದ ಸಿಟ್ಟಾದ ಜಮೀನಿನ ಮಾಲೀಕರು ಅಧಿಕಾರಿಗಳನ್ನೇ ಪ್ರತಿವಾದಿಗಳನ್ನಾಗಿ ಮಾಡಿ ಅಂಕೋಲಾ ಸಿವಿಲ್ ನ್ಯಾಯಾಲಯದಲ್ಲಿ OS 125/2024 ರಂತೆ ತಡೆಯಾಜ್ಞೆ ಕೋರಿ ದಾವೆ ಹೂಡಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ಚಾಲ್ತಿಯಲ್ಲಿದ್ದರೂ, ಸಾರ್ವಜನಿಕ ರಸ್ತೆ ಬಂದ್ ಮಾಡಲು ನ್ಯಾಯಾಲಯ ಯಾವುದೇ ತಡೆಯಾಜ್ಞೆ ನೀಡಿರಲಿಲ್ಲ. ಆದರೂ ಜಮೀನಿನ ಮಾಲೀಕರೇ ತಮ್ಮ ಪರವಾಗಿ ಯಾವುದೇ ತಡೆಯಾಜ್ಞೆ ಇಲ್ಲದಿರುವುದು ಗೊತ್ತಿದ್ದರೂ ಸಹ ಪುನಃ ಪುನಃ ರಸ್ತೆಗೆ ದೊಡ್ಡ ಕಲ್ಲುಗಳನ್ನು ಹಾಕಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಕೊಡುತ್ತಾ ಬಂದಿದ್ದಾರೆ.

ಕಳೆದ ಏಪ್ರಿಲ್ 23ರಂದು ರಸ್ತೆ ಬಂದ್ ಮಾಡಿದ್ದನ್ನು ಧೈರ್ಯದಿಂದ ಪ್ರಶ್ನಿಸಲು ಹೋದ ನೊಂದ ದೂರುದಾರ ಕೃಷ್ಣ ನಾಯ್ಕ್ ಅವರನ್ನು ಸಾರ್ವಜನಿಕವಾಗಿ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕೊಲೆ ಮಾಡುವುದಾಗಿ ಭೀಕರ ಬೆದರಿಕೆ ಹಾಕಿದ್ದಾರೆ. ಜಮೀನಿನ ಮಾಲೀಕರು ತಾವೇ ಕೋರ್ಟ್ ಮೆಟ್ಟಿಲೇರಿದ್ದರೂ ಕಾನೂನಿಗೆ ಕಿಂಚಿತ್ತೂ ಗೌರವ ನೀಡದೆ, ನಿರಂತರವಾಗಿ ತೊಂದರೆ ಕೊಡುತ್ತಾ ಬಂದಿರುವುದರಿಂದಲೇ ಸ್ಥಳದಲ್ಲಿ ಇಷ್ಟೊಂದು ದೊಡ್ಡ ಅನಾಹುತ ಮತ್ತು ಅಶಾಂತಿಯ ವಾತಾವರಣ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಈ ದೌರ್ಜನ್ಯಕ್ಕೆ ಬ್ರೇಕ್ ಹಾಕಲು ನ್ಯಾಯಾಲಯದ ಆದೇಶದ ಬೆನ್ನಲ್ಲೇ ಪೋಲಿಸ್ ಇಲಾಖೆ ಮೂರು ಜನ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಜಿಂಕೆ ಮಾಂಸ ಪ್ರಕರಣದ ಪ್ರಮುಖ ಆರೋಪಿ ಬಂಧನ

ಮುಂಡಗೋಡ: ಅರಣ್ಯ ವಲಯದ ಇಂದೂರು ಶಾಖೆಯ ನಂದಿಕಟ್ಟ ಗಸ್ತು ವ್ಯಾಪ್ತಿಯಲ್ಲಿ ಜುಲೈ 17ರಂದು ಪತ್ತೆಯಾದ ಅಕ್ರಮ ಜಿಂಕೆ ಮಾಂಸ ಪ್ರಕರಣದ…

14 hours ago

ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ನಂಜನಗೂಡು: ಮೈಸೂರಿನ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ…

14 hours ago

ಲೊಕ್ಯಾಂಟೋದಲ್ಲಿ ಯುವತಿಯರ ಹೆಸರಿನಲ್ಲಿ ಬಲೆ: ಭೇಟಿಗೆ ಬಂದವರ ಅಪಹರಣ, ಸುಲಿಗೆ; 11 ಮಂದಿ ಬಂಧನ

ಬೆಂಗಳೂರು: ಆನ್‌ಲೈನ್‌ನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಜಾಹೀರಾತುಗಳನ್ನು ಪ್ರಕಟಿಸಿ, ಭೇಟಿಗೆ ಬರುವ ವ್ಯಕ್ತಿಗಳನ್ನು ಅಪಹರಿಸಿ ಹಣ, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು…

14 hours ago

ಗೌರಿಬಿದನೂರು ನಗರ ಠಾಣೆ ಪೊಲೀಸರು ಭರ್ಜರಿ ಬೇಟಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ

ಗೌರಿಬಿದನೂರು: ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು ₹10 ಲಕ್ಷ ಬೆಲೆ ಬಾಳುವ 10 ದ್ವಿಚಕ್ರವಾಹನ, ₹67 ಸಾವಿರ…

14 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಏಳು ವರ್ಷದ ಮಗ: ಪ್ರಿಯಕರನ ಜೊತೆಗೂಡಿ ಕಿರುಬಾಲಕನ ಮೇಲೆ ಕ್ರೂರ ಹಲ್ಲೆ ಮಾಡಿದ ತಾಯಿ!

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ. ಕೋಟಾ ಮಂಡಲ ಕೇಂದ್ರದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ…

21 hours ago

ಅತ್ತೆಯೊಂದಿಗೆ ಅಕ್ರಮ ಸಂಬಂಧ, ಮಗಳೊಂದಿಗೆ ಮದುವೆ… ತಿಂಗಳು ತುಂಬುವ ಮುನ್ನವೇ ಪತ್ನಿಯ ಕೊಲೆ; ಬೆಡ್‌ರೂಮ್‌ನಲ್ಲೇ ಶವ ಹೂತು ನಾಟಕವಾಡಿದ ಪತಿ!

ಅತ್ತೆಯೊಂದಿಗಿನ ಅಕ್ರಮ ಸಂಬಂಧ ಮುಂದುವರಿಸಲು ಮಗಳನ್ನೇ ವಿವಾಹವಾಗಿದ್ದ ಯುವಕ, ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿಯನ್ನು ಕೊಲೆ ಮಾಡಿ ಮನೆಯ ಬೆಡ್‌ರೂಮ್‌ನಲ್ಲೇ…

21 hours ago