Categories: CorruptionLatest

ನಕಲಿ ದಾಖಲೆಗಳಿಂದ ಉದ್ಯೋಗ ಪಡೆಯಲು ಯತ್ನ – ರಾಜ್ಯದಲ್ಲಿ 20 ಅತಿಥಿ ಉಪನ್ಯಾಸಕರು ಪತ್ತೆ..!

ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಉದ್ಯೋಗ ಪಡೆಯಲು ಪ್ರಯತ್ನಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ. ಈ ಪರಿಶೀಲನೆಯ ವೇಳೆ 20 ಮಂದಿ ಅತಿಥಿ ಉಪನ್ಯಾಸಕರು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದಾದ್ಯಂತ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಪರಿಶೀಲನೆಯಲ್ಲಿ ಪಿಎಚ್‌ಡಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 10 ಮಂದಿ, ವಿಶೇಷ ಚೇತನ ಪ್ರಮಾಣಪತ್ರ ನಕಲಿ ನೀಡಿದ 4 ಮಂದಿ, ಸ್ನಾತಕೋತ್ತರ ಪದವಿ ಅಂಕಪಟ್ಟಿ ನಕಲಿ ಸಲ್ಲಿಸಿದ 2 ಮಂದಿ ಹಾಗೂ ಎಂ.ಫಿಲ್‌ ನಕಲಿ ಪ್ರಮಾಣಪತ್ರ ನೀಡಿದ ಒಬ್ಬರನ್ನು ಪತ್ತೆಹಚ್ಚಲಾಗಿದೆ.

ಜಿಲ್ಲಾವಾರು ಪತ್ತೆ: ಜಿಲ್ಲಾವಾರು ನೋಡಿದರೆ ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ ನಾಲ್ವರು ಸಿಕ್ಕಿಬಿದ್ದಿದ್ದಾರೆ. ಕಲಬುರಗಿಯ ನಾಲ್ವರು ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿರುವುದು ಪತ್ತೆಯಾಗಿದ್ದು, ಬೆಳಗಾವಿಯಲ್ಲಿ ಮೂವರು ವಿಶೇಷ ಚೇತನ ಪ್ರಮಾಣಪತ್ರ ಹಾಗೂ ಒಬ್ಬರು ಸ್ನಾತಕೋತ್ತರ ಅಂಕಪಟ್ಟಿ ನಕಲಿ ಸಲ್ಲಿಸಿರುವುದು ತಿಳಿದುಬಂದಿದೆ.

ಇನ್ನು ಬಾಗಲಕೋಟೆಯಲ್ಲಿ ಇಬ್ಬರು ನಕಲಿ ಸ್ನಾತಕೋತ್ತರ ಪ್ರಮಾಣಪತ್ರ ನೀಡಿರುವುದು ಪತ್ತೆಯಾಗಿದೆ. ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ನಕಲಿ ವಿಶೇಷ ಚೇತನ ಪ್ರಮಾಣಪತ್ರ ಸಲ್ಲಿಸಿದ್ದು, ಶಿವಮೊಗ್ಗ, ಹಾವೇರಿ, ವಿಜಯನಗರ, ಉಡುಪಿ, ಕೋಲಾರ ಹಾಗೂ ಹಾಸನ ಜಿಲ್ಲೆಗಳಲ್ಲಿ ತಲಾ ಒಬ್ಬರು ನಕಲಿ ಪಿಎಚ್‌ಡಿ ದಾಖಲೆಗಳನ್ನು ನೀಡಿದ್ದಾರೆ. ಉತ್ತರ ಕನ್ನಡದಲ್ಲಿ ಒಬ್ಬರು ನಕಲಿ ಎಂ.ಫಿಲ್ ಪ್ರಮಾಣಪತ್ರ ನೀಡಿದ್ದರೆ, ಕೋಲಾರ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸ್ನಾತಕೋತ್ತರ ಅಂಕಪಟ್ಟಿ ನಕಲಿ ಸಲ್ಲಿಸಿರುವುದು ಪತ್ತೆಯಾಗಿದೆ.

ಕ್ರಿಮಿನಲ್ ಪ್ರಕರಣ ಎಚ್ಚರಿಕೆ: ಅತಿಥಿ ಉಪನ್ಯಾಸಕರು ನೇಮಕವಾಗುವ ವೇಳೆ ಸಲ್ಲಿಸಿದ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚಿಸಲಾಗಿದೆ. ಪರಿಶೀಲನೆ ವೇಳೆ 20 ಮಂದಿ ಅತಿಥಿ ಉಪನ್ಯಾಸಕರ ದಾಖಲೆಗಳು ನಕಲಿಯಾಗಿರುವುದು ದೃಢಪಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ನಕಲಿ ಪ್ರಮಾಣಪತ್ರಗಳ ಆಧಾರದಲ್ಲಿ ಉದ್ಯೋಗ ಪಡೆದಿರುವವರು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ರಾಜ್ಯದಲ್ಲಿ 5764 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲು…

6 hours ago

ತಂಗಿ ಜೊತೆ ಬಂದ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿ ಮತಾಂತರಕ್ಕೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣವೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಶಾಲೆಯ ಸ್ನೇಹದ ನೆಪದಲ್ಲಿ…

14 hours ago

ಮದುವೆ ರದ್ದು ಮಾಡಿದ ದ್ವೇಷ: ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಯುವಕ..!

ತೆಲಂಗಾಣದ ಹೈದರಾಬಾದ್ ನಗರದ ಪೋಚರಂ ಪ್ರದೇಶದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ನಿಶ್ಚಯವಾದ ಬಳಿಕ ತನ್ನಿಗೆ ಹೆಚ್‌ಐವಿ (HIV)…

15 hours ago

ಅತ್ತಿಗೆ ಮೈದುನನ ಲವ್ ಟ್ರ್ಯಾಕ್ ಗೆ ಅಡ್ಡಿಯಾದ ಅಮ್ಮನ ಟ್ರ್ಯಾಕ್ ಕ್ಲೋಸ್

ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಸಂಚಲನ ಮೂಡಿಸಿದೆ. ಆರಂಭದಲ್ಲಿ ಸಾಮಾನ್ಯ ಕಸದ…

22 hours ago

ಕೆಎಸ್‌ಆರ್‌ಟಿಸಿ ಅನುಕಂಪ ನೇಮಕಾತಿ ನಿಯಮ ಬದಲಾವಣೆ – ವಿವಾಹಿತ ಮಗಳು, ಸಹೋದರಿಯರಿಗೂ ಅವಕಾಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ನೌಕರರ ಕುಟುಂಬಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಅನುಕಂಪದ ಆಧಾರದ…

1 day ago

ಶಾಲಾ ತರಗತಿಯಲ್ಲಿ 10 ಅಡಿ ಕಾಳಿಂಗ ಸರ್ಪ ಪತ್ತೆ: ವಿದ್ಯಾರ್ಥಿಗಳಲ್ಲಿ ಆತಂಕ

ಕಾರವಾರ: ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾದ ಘಟನೆ…

1 day ago