ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಉದ್ಯೋಗ ಪಡೆಯಲು ಪ್ರಯತ್ನಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ. ಈ ಪರಿಶೀಲನೆಯ ವೇಳೆ 20 ಮಂದಿ ಅತಿಥಿ ಉಪನ್ಯಾಸಕರು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದಾದ್ಯಂತ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಪರಿಶೀಲನೆಯಲ್ಲಿ ಪಿಎಚ್ಡಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 10 ಮಂದಿ, ವಿಶೇಷ ಚೇತನ ಪ್ರಮಾಣಪತ್ರ ನಕಲಿ ನೀಡಿದ 4 ಮಂದಿ, ಸ್ನಾತಕೋತ್ತರ ಪದವಿ ಅಂಕಪಟ್ಟಿ ನಕಲಿ ಸಲ್ಲಿಸಿದ 2 ಮಂದಿ ಹಾಗೂ ಎಂ.ಫಿಲ್ ನಕಲಿ ಪ್ರಮಾಣಪತ್ರ ನೀಡಿದ ಒಬ್ಬರನ್ನು ಪತ್ತೆಹಚ್ಚಲಾಗಿದೆ.
ಜಿಲ್ಲಾವಾರು ಪತ್ತೆ: ಜಿಲ್ಲಾವಾರು ನೋಡಿದರೆ ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ ನಾಲ್ವರು ಸಿಕ್ಕಿಬಿದ್ದಿದ್ದಾರೆ. ಕಲಬುರಗಿಯ ನಾಲ್ವರು ನಕಲಿ ಪಿಎಚ್ಡಿ ಪ್ರಮಾಣಪತ್ರ ನೀಡಿರುವುದು ಪತ್ತೆಯಾಗಿದ್ದು, ಬೆಳಗಾವಿಯಲ್ಲಿ ಮೂವರು ವಿಶೇಷ ಚೇತನ ಪ್ರಮಾಣಪತ್ರ ಹಾಗೂ ಒಬ್ಬರು ಸ್ನಾತಕೋತ್ತರ ಅಂಕಪಟ್ಟಿ ನಕಲಿ ಸಲ್ಲಿಸಿರುವುದು ತಿಳಿದುಬಂದಿದೆ.
ಇನ್ನು ಬಾಗಲಕೋಟೆಯಲ್ಲಿ ಇಬ್ಬರು ನಕಲಿ ಸ್ನಾತಕೋತ್ತರ ಪ್ರಮಾಣಪತ್ರ ನೀಡಿರುವುದು ಪತ್ತೆಯಾಗಿದೆ. ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ನಕಲಿ ವಿಶೇಷ ಚೇತನ ಪ್ರಮಾಣಪತ್ರ ಸಲ್ಲಿಸಿದ್ದು, ಶಿವಮೊಗ್ಗ, ಹಾವೇರಿ, ವಿಜಯನಗರ, ಉಡುಪಿ, ಕೋಲಾರ ಹಾಗೂ ಹಾಸನ ಜಿಲ್ಲೆಗಳಲ್ಲಿ ತಲಾ ಒಬ್ಬರು ನಕಲಿ ಪಿಎಚ್ಡಿ ದಾಖಲೆಗಳನ್ನು ನೀಡಿದ್ದಾರೆ. ಉತ್ತರ ಕನ್ನಡದಲ್ಲಿ ಒಬ್ಬರು ನಕಲಿ ಎಂ.ಫಿಲ್ ಪ್ರಮಾಣಪತ್ರ ನೀಡಿದ್ದರೆ, ಕೋಲಾರ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸ್ನಾತಕೋತ್ತರ ಅಂಕಪಟ್ಟಿ ನಕಲಿ ಸಲ್ಲಿಸಿರುವುದು ಪತ್ತೆಯಾಗಿದೆ.
ಕ್ರಿಮಿನಲ್ ಪ್ರಕರಣ ಎಚ್ಚರಿಕೆ: ಅತಿಥಿ ಉಪನ್ಯಾಸಕರು ನೇಮಕವಾಗುವ ವೇಳೆ ಸಲ್ಲಿಸಿದ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚಿಸಲಾಗಿದೆ. ಪರಿಶೀಲನೆ ವೇಳೆ 20 ಮಂದಿ ಅತಿಥಿ ಉಪನ್ಯಾಸಕರ ದಾಖಲೆಗಳು ನಕಲಿಯಾಗಿರುವುದು ದೃಢಪಟ್ಟಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ನಕಲಿ ಪ್ರಮಾಣಪತ್ರಗಳ ಆಧಾರದಲ್ಲಿ ಉದ್ಯೋಗ ಪಡೆದಿರುವವರು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…