ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ಸಿನಲ್ಲಿ ಸಿಮೆಂಟ್ ಚೀಲದ ಆವರಣದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಶಕೀರಾ ಬೇಪಾರಿ ಎಂಬ ಮಹಿಳೆಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ನವನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಘಟನೆ ಬಾಗಲಕೋಟೆ ನಗರದ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು, ಶಕೀರಾ ಎಂಬವರು ಬಸ್‌ವೊಂದರಲ್ಲಿ ಸಿಮೆಂಟ್ ಚೀಲದಲ್ಲಿ ಶಂಕಿತ ಗೋಮಾಂಸವನ್ನು ತುಂಬಿಸಿಕೊಂಡು ಪ್ರಯಾಣ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಬಸ್ ಚಾಲಕನ ಗಮನಕ್ಕೆ ವಿಷಯ ಬಂದ ಕೂಡಲೆ ಅವರು ಶಕೀರಾರನ್ನು ಬಸ್ಸಿನಿಂದ ಇಳಿಸಿದ್ದಾರೆ.

ಆ ಬಳಿಕ, ಬಸ್ ನಿರ್ವಾಹಕ ಟಂಟಂ ವಾಹನವನ್ನು ಕರೆಸಿ ಶಂಕಿತ ಮಾಂಸವನ್ನು ಸ್ಥಳಾಂತರಿಸಲು ಯತ್ನಿಸುತ್ತಿದ್ದರು. ಈ ಘಟನೆ ಬಗ್ಗೆ ಹಿಂದೂ ಸಂಘಟನೆ ಸದಸ್ಯರಿಗೆ ಮಾಹಿತಿ ಲಭಿತವಾಗುತ್ತಿದ್ದಂತೆಯೇ ಅವರು ಸ್ಥಳಕ್ಕಾಗಮಿಸಿ ಶಕೀರಾರನ್ನು ತಡೆದು ಪೊಲೀಸರು ಸೇರಿಸಿದರು.

ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಾಂಸವನ್ನು ಪರೀಕ್ಷೆಗಾಗಿ ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಪೂರ್ಣ ತನಿಖೆಯ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.

Related News

error: Content is protected !!