ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ಸಿನಲ್ಲಿ ಸಿಮೆಂಟ್ ಚೀಲದ ಆವರಣದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಶಕೀರಾ ಬೇಪಾರಿ ಎಂಬ ಮಹಿಳೆಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ನವನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಘಟನೆ ಬಾಗಲಕೋಟೆ ನಗರದ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು, ಶಕೀರಾ ಎಂಬವರು ಬಸ್ವೊಂದರಲ್ಲಿ ಸಿಮೆಂಟ್ ಚೀಲದಲ್ಲಿ ಶಂಕಿತ ಗೋಮಾಂಸವನ್ನು ತುಂಬಿಸಿಕೊಂಡು ಪ್ರಯಾಣ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಬಸ್ ಚಾಲಕನ ಗಮನಕ್ಕೆ ವಿಷಯ ಬಂದ ಕೂಡಲೆ ಅವರು ಶಕೀರಾರನ್ನು ಬಸ್ಸಿನಿಂದ ಇಳಿಸಿದ್ದಾರೆ.
ಆ ಬಳಿಕ, ಬಸ್ ನಿರ್ವಾಹಕ ಟಂಟಂ ವಾಹನವನ್ನು ಕರೆಸಿ ಶಂಕಿತ ಮಾಂಸವನ್ನು ಸ್ಥಳಾಂತರಿಸಲು ಯತ್ನಿಸುತ್ತಿದ್ದರು. ಈ ಘಟನೆ ಬಗ್ಗೆ ಹಿಂದೂ ಸಂಘಟನೆ ಸದಸ್ಯರಿಗೆ ಮಾಹಿತಿ ಲಭಿತವಾಗುತ್ತಿದ್ದಂತೆಯೇ ಅವರು ಸ್ಥಳಕ್ಕಾಗಮಿಸಿ ಶಕೀರಾರನ್ನು ತಡೆದು ಪೊಲೀಸರು ಸೇರಿಸಿದರು.
ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಾಂಸವನ್ನು ಪರೀಕ್ಷೆಗಾಗಿ ಫೊರೆನ್ಸಿಕ್ ಲ್ಯಾಬ್ಗೆ ಕಳುಹಿಸಲಾಗಿದೆ. ಪೂರ್ಣ ತನಿಖೆಯ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…