Latest

ಆರು ವರ್ಷದ ಬಾಲಕಿಗೆ ಬಲವಂತ ಮದುವೆ ಯತ್ನ!: ತಾಲಿಬಾನ್ ಮಧ್ಯಪ್ರವೇಶ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಆರು ವರ್ಷದ ಬಾಲಕಿಯನ್ನು ಅವಳ ತಂದೆ ಹಣಕ್ಕಾಗಿ 45 ವರ್ಷದ ವ್ಯಕ್ತಿಗೆ ಮದುವೆ ಮಾಡಿಸಲು ಯತ್ನಿಸಿದ್ದ ಪಾಶವಿಕ ಕೃತ್ಯ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಾಲಕಿ ಹಾಗೂ ವರನ ಫೋಟೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಹೆಲ್ಮಂಡ್ ಪ್ರಾಂತ್ಯದಲ್ಲಿ ಬಾಲಕಿ ಹಾಗೂ ಈಗಾಗಲೇ ಇಬ್ಬರು ಹೆಂಡತಿಯರಿರುವ ವ್ಯಕ್ತಿಯ ಮದುವೆ ಜುಲೈ 5ರಂದು ನಡೆಯಬೇಕಿತ್ತು. ಆದರೆ ಈ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ತಾಲಿಬಾನ್ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದು, ಬಾಲಕಿ ಹಾಗೂ ವರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಲಿಬಾನ್‌ ಮೂಲಗಳ ಪ್ರಕಾರ, ಬಾಲಕಿ ಒಂಬತ್ತು ವರ್ಷ ಪೂರೈಸುವವರೆಗೆ ಮದುವೆಗೆ ಅನುಮತಿ ನೀಡಲಾಗದು ಎಂದು ವರನಿಗೆ ಸ್ಪಷ್ಟಪಡಿಸಲಾಗಿದೆ. ಬಾಲಕಿಯನ್ನು ತಾತ್ಕಾಲಿಕವಾಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆದರೆ ಈವರೆಗೆ ಯಾರ ಮೇಲೂ ಅಧಿಕೃತ ಆರೋಪ ದಾಖಲೆಯಾಗಿಲ್ಲ ಎನ್ನಲಾಗಿದೆ.

ಈ ಘಟನೆ ಮೌಲ್ಯಗಳ ಕುಸಿತ ಮತ್ತು ಬಡತನದ ನಿಕೃಷ್ಟ ಪರಿಣಾಮವಾಗಿ ಬಾಲ್ಯ ವಿವಾಹವು ಅಫ್ಘಾನಿಸ್ತಾನದಲ್ಲಿ ಮತ್ತೆ ತಲೆ ಎತ್ತುತ್ತಿರುವುದನ್ನು ಮತ್ತೆ ಒತ್ತಿಹೇಳುತ್ತಿದೆ. 2021ರಲ್ಲಿ ತಾಲಿಬಾನ್‌ ಮರು ಅಧಿಕಾರಕ್ಕೆ ಬಂದ ಬಳಿಕ ಹೆಣ್ಣುಮಕ್ಕಳ ಶಿಕ್ಷಣದ ಮೇಲೆ ನಿಷೇಧ ಜಾರಿಗೆ ಬಂದು, ಇದರ ಪರಿಣಾಮವಾಗಿ ಬಾಲ್ಯ ವಿವಾಹದ ಪ್ರಮಾಣ 25% ರಷ್ಟು ಹೆಚ್ಚಾಗಿದೆ ಎಂದು ವಿಶ್ವಸಂಸ್ಥೆಯ ಮಹಿಳಾ ಆಯೋಗ ವರದಿ ಮಾಡಿತ್ತು.

ಇದೇ ವೇಳೆ, ಮಹಿಳೆಯರು ಸಾರ್ವಜನಿಕವಾಗಿ ಮುಖ ತೋರಿಸುವುದು ಮತ್ತು ಮಾತನಾಡುವುದನ್ನು ಕೂಡ ತಾಲಿಬಾನ್ ನಿಷೇಧಿಸಿರುವುದು, ಮಹಿಳಾ ಹಕ್ಕುಗಳ ಬಗ್ಗೆ ಆಂತರರಾಷ್ಟ್ರೀಯ ಸಮುದಾಯದಿಂದ ಗಂಭೀರ ಟೀಕೆಗಳನ್ನು ಮೂಡಿಸಿದೆ. ಆದರೆ ತಾಲಿಬಾನ್ ಇವುಗಳನ್ನು ನಿರಾಕರಿಸುತ್ತಾ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.

ಈ ಘಟನೆ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಮಹಿಳಾ ಮತ್ತು ಬಾಲಕರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಮತ್ತೊಮ್ಮೆ ವಿಶ್ವದ ಗಮನ ಸೆಳೆಯುತ್ತಿದೆ.

nazeer ahamad

Recent Posts

ಕುಡಿಯಲು ಹಣ ನೀಡದ ತಾಯಿಯನ್ನು ಮಗನೇ ಕೊಂದ ಭೀಕರ ಘಟನೆ : ಶವ ಪಕ್ಕದಲ್ಲೇ ಮಲಗಿದ ಹಂತಕ

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲ್ಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕುಡಿಯಲು ಹಣ ಕೇಳಿದ ಮಗನಿಗೆ ತಾಯಿ ನಿಷೇಧಿಸಿದ್ದಕ್ಕೆ…

42 minutes ago

ದರ್ಭಂಗಾದಲ್ಲಿ ಯುವತಿ ಅಪಹರಣ: ಕ್ರಮಕೈಗೊಳ್ಳದೆ ನಿರ್ಲಕ್ಷಿಸಿದ ಪೊಲೀಸರ ವಿರುದ್ಧ ಆಕ್ರೋಶ

ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ದಿನದ ಬೆಳಗಿನ ಜಾವ ನಡೆದ ಯುವತಿಯ ಅಪಹರಣ ಪ್ರಕರಣ ಇದೀಗ ಪೊಲೀಸರ ನಿರ್ಲಕ್ಷ್ಯ ಆರೋಪದಿಂದ ಚರ್ಚೆಗೆ…

57 minutes ago

ಮಂಗಳೂರು: ನೇತ್ರಾವತಿ ನದಿಯಿಂದ ಮರಳು ಕಳ್ಳ ಸಾಗಾಟ – ಪಿಕಪ್ ಹಾಗೂ ಸ್ಕೂಟರ್ ವಶಕ್ಕೆ

ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…

13 hours ago

ಭಟ್ಕಳ ಸಮುದ್ರ ದುರಂತ: ದೋಣಿ ಮುಗುಚಿ ನಾಲ್ವರು ಮೀನುಗಾರರು ನಾಪತ್ತೆ, ಇಬ್ಬರು ರಕ್ಷಣೆ

ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…

14 hours ago

ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿ ಮೇಲೆ ಪ್ರಿಯಕರನಿಂದ ಹಲ್ಲೆ!

ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…

14 hours ago

ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನ ವಿಡಿಯೋ ಕಾಲ್! ಶಿಕ್ಷಕಿ ವಿರುದ್ ಪೋಕ್ಸೋ

ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…

14 hours ago