ಶಿರಸಿ: ಜಮೀನು ವ್ಯಾಜ್ಯದ ವಿಷಯವಾಗಿ ವ್ಯಕ್ತಿಯೊಬ್ಬರ ಕೊಲೆಗೆ ಪ್ರಯತ್ನಿಸಿದ ಆರೋಪಿ ಪರಮೇಶ್ವರ ಪಿಳ್ಳೆ ಅಪರಾಧಿ ಎಂದು ಸಾಭೀತಾಗಿದೆ. ಈ ಹಿನ್ನಲೆ ನ್ಯಾಯಾಲಯ ಪರಮೇಶ್ವರ ಪಿಳ್ಳೆ ಅವರಿಗೆ ಶಿಕ್ಷೆಯನ್ನು ಪ್ರಕಟಿಸಿದೆ.
ಶಿರಸಿ ಮರಾಠಿಕೊಪ್ಪದ ನಿವಾಸಿ ಪರಮೇಶ್ವರ ಕನ್ನಾ ಪಿಳ್ಳೆ ಹಾಗೂ ಈಶ್ವರ ಕೃಷ್ಣಾ ದೇವಾಡಿಗ ನಡುವೆ ವೈಮನಸ್ಸಿತ್ತು. ಭೂ ವಿಷಯವಾಗಿ ಶುರುವಾದ ದ್ವೇಷ ತಾರಕಕ್ಕೇರಿದ್ದು, ಪರಮೇಶ್ವರ ಪಿಳ್ಳೆ ಅವರು ಈಶ್ವರ ದೇವಾಡಿಗ ಅವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿ ತನಿಖೆ ನಡೆಯಿತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಸರ್ಕಾರಿ ಅಭಿಯೋಜಕ ರಾಜೇಶ ಎಂ ಮಳಗಿಕರ್ ಅವರು ಈಶ್ವರ ದೇವಾಡಿಗ ಅವರ ಪರವಾಗಿ ವಕಾಲತು ಮಾಡಿದರು. ಕೊಲೆ ಯತ್ನ ನಡೆದ ಅವಧಿಯಲ್ಲಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿದ್ದ ಪಿಎಸ್ಐ ಭೀಮಾಶಂಕರ ಸಿನ್ನೂರ್ ಸಂಗಣ್ಣ ಅವರು ನೀಡಿದ ವರದಿ ಹಾಗೂ ದಾಖಲೆಗಳ ಬಗ್ಗೆ ನ್ಯಾಯಾಲಯಕ್ಕೆ ಮನವರಕೆ ಮಾಡಿದರು. ಪಿಎಸ್ಐ ರತ್ನಾ ಕುರಿ, ಪೊಲೀಸ್ ಸಿಬ್ಬಂದಿ ಹನುಮಂತ ರಾಜಪ್ಪ ಬೋವಿ ಹಾಗೂ ರಮೇಶ ಮುಚ್ಚಂಡಿ ಅವರು ನ್ಯಾಯಾಲಯಕ್ಕೆ ಪ್ರಮುಖ ದಾಖಲಾತಿ ಒದಗಿಸಿದರು.ವಾದ ಆಲಿಸಿದ ನ್ಯಾಯಾಲಯ ಜಮೀನು ಪಾಲಿನ ವಿಷಯದಲ್ಲಿ ನಡೆದ ಜಗಳದಲ್ಲಿ ಈಶ್ವರ ದೇವಾಡಿಗ ಅವರಿಗೆ ಪರಮೇಶ್ವರ್ ಪಿಳ್ಳೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದು ಸತ್ಯ ಎಂದು ಘೋಷಿಸಿತು. ಪರಮೇಶ್ವರ ಪಿಳ್ಳೆ ಅವರಿಗೆ 5 ಸಾವಿರ ರೂ ದಂಡವನ್ನು ವಿಧಿಸಿದ್ದು, ತಪ್ಪಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿತು.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…