Latest

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಶಿರಸಿ: ಜಮೀನು ವ್ಯಾಜ್ಯದ ವಿಷಯವಾಗಿ ವ್ಯಕ್ತಿಯೊಬ್ಬರ ಕೊಲೆಗೆ ಪ್ರಯತ್ನಿಸಿದ ಆರೋಪಿ ಪರಮೇಶ್ವರ ಪಿಳ್ಳೆ ಅಪರಾಧಿ ಎಂದು ಸಾಭೀತಾಗಿದೆ. ಈ ಹಿನ್ನಲೆ ನ್ಯಾಯಾಲಯ ಪರಮೇಶ್ವರ ಪಿಳ್ಳೆ ಅವರಿಗೆ ಶಿಕ್ಷೆಯನ್ನು ಪ್ರಕಟಿಸಿದೆ.
ಶಿರಸಿ ಮರಾಠಿಕೊಪ್ಪದ ನಿವಾಸಿ ಪರಮೇಶ್ವರ ಕನ್ನಾ ಪಿಳ್ಳೆ ಹಾಗೂ ಈಶ್ವರ ಕೃಷ್ಣಾ ದೇವಾಡಿಗ ನಡುವೆ ವೈಮನಸ್ಸಿತ್ತು. ಭೂ ವಿಷಯವಾಗಿ ಶುರುವಾದ ದ್ವೇಷ ತಾರಕಕ್ಕೇರಿದ್ದು, ಪರಮೇಶ್ವರ ಪಿಳ್ಳೆ ಅವರು ಈಶ್ವರ ದೇವಾಡಿಗ ಅವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿ ತನಿಖೆ ನಡೆಯಿತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಸರ್ಕಾರಿ ಅಭಿಯೋಜಕ ರಾಜೇಶ ಎಂ ಮಳಗಿಕರ್ ಅವರು ಈಶ್ವರ ದೇವಾಡಿಗ ಅವರ ಪರವಾಗಿ ವಕಾಲತು ಮಾಡಿದರು. ಕೊಲೆ ಯತ್ನ ನಡೆದ ಅವಧಿಯಲ್ಲಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿದ್ದ ಪಿಎಸ್‌ಐ ಭೀಮಾಶಂಕರ ಸಿನ್ನೂರ್ ಸಂಗಣ್ಣ ಅವರು ನೀಡಿದ ವರದಿ ಹಾಗೂ ದಾಖಲೆಗಳ ಬಗ್ಗೆ ನ್ಯಾಯಾಲಯಕ್ಕೆ ಮನವರಕೆ ಮಾಡಿದರು. ಪಿಎಸ್‌ಐ ರತ್ನಾ ಕುರಿ, ಪೊಲೀಸ್‌ ಸಿಬ್ಬಂದಿ ಹನುಮಂತ ರಾಜಪ್ಪ ಬೋವಿ ಹಾಗೂ ರಮೇಶ ಮುಚ್ಚಂಡಿ ಅವರು ನ್ಯಾಯಾಲಯಕ್ಕೆ ಪ್ರಮುಖ ದಾಖಲಾತಿ ಒದಗಿಸಿದರು.ವಾದ ಆಲಿಸಿದ ನ್ಯಾಯಾಲಯ ಜಮೀನು ಪಾಲಿನ ವಿಷಯದಲ್ಲಿ ನಡೆದ ಜಗಳದಲ್ಲಿ ಈಶ್ವರ ದೇವಾಡಿಗ ಅವರಿಗೆ ಪರಮೇಶ್ವ‌ರ್ ಪಿಳ್ಳೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದು ಸತ್ಯ ಎಂದು ಘೋಷಿಸಿತು. ಪರಮೇಶ್ವರ ಪಿಳ್ಳೆ ಅವರಿಗೆ 5 ಸಾವಿರ ರೂ ದಂಡವನ್ನು ವಿಧಿಸಿದ್ದು, ತಪ್ಪಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿತು.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago