Crime

ಮಸೀದಿಯಲ್ಲಿ 5 ವರ್ಷದ ಬಾಲಕಿಗೆ ಅತ್ಯಾಚಾರಕ್ಕೆ ಯತ್ನ: 2 ವರ್ಷಗಳ ನಂತರ ಬೆಳಕಿಗೆ !

ಬೆಳಗಾವಿ, ಆಗಸ್ಟ್ 6: ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯೊಂದರಲ್ಲಿ 5 ವರ್ಷದ ಬಾಲಕಿಯ ಮೇಲೆ ಮೌಲ್ವಿ ಅತ್ಯಾಚಾರಕ್ಕೆ ಯತ್ನಿಸಿದ ಘೋರ ಘಟನೆ ಎರಡು ವರ್ಷಗಳ ನಂತರ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಇದೀಗ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಈ ಅಪಘಾತ 2023ರ ಅಕ್ಟೋಬರ್ 5ರಂದು ಸಂಭವಿಸಿದ್ದು, ಆರೋಪಿಯಾಗಿರುವ ಮೌಲ್ವಿ ತುಫೇಲ್ ಅಹ್ಮದ್ ದಾದಾಫೀರ್ ವಿರುದ್ಧ ಇದೀಗ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ, ಈ ಪ್ರಕರಣವು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋವೊಂದರಿಂದ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಈ ಪೋಸ್ಟ್‌ನಲ್ಲಿ ಆಡಿಯೋ ಮತ್ತು ದೃಶ್ಯವೊಂದರ ಮೂಲಕ ಬಾಲಕಿಯ ಮೇಲೆ ವ್ಯಕ್ತಿಯೊಬ್ಬನು ದುಷ್ಟ ಕೃತ್ಯಕ್ಕೆ ಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿತ್ತು.

ಪೋಸ್ಟ್‌ ಲಭ್ಯವಾದ ಕೂಡಲೇ ಸಿಇಎನ್ ಪೊಲೀಸ್ ಇಲಾಖೆ ಮೂಲಕ ತನಿಖೆ ಆರಂಭಿಸಲಾಗಿದ್ದು, ವಿಡಿಯೋದಲ್ಲಿನ ಸ್ಥಳದ ವಿವರ ಆಧರಿಸಿ ಮುರಗೋಡ ಠಾಣೆಗೆ ಮಾಹಿತಿ ನೀಡಲಾಗಿತ್ತು. ಹೆಚ್ಚಿನ ತನಿಖೆಯಲ್ಲಿ ಪ್ರಕರಣ 2023ರ ಅಕ್ಟೋಬರ್ 5ರಂದು ನಡೆದಿರುವುದು ದೃಢಪಟ್ಟಿದೆ.

ಆರೋಪಿಯು ಮಹಾಲಿಂಗಪುರದಿಂದ ಆಗಮಿಸಿದ ಬಳಿಕ, ತನ್ನ ಸಂಬಂಧಿತ ಮಹಿಳೆಯ ಮನೆಯಲ್ಲಿ ವಾಸ್ತವ್ಯಕ್ಕೆ ಇರುತ್ತಿದ್ದ ವೇಳೆ ಈ ಜಘನ್ಯ ಕೃತ್ಯಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತಕ್ಷಣ ಸ್ಥಳೀಯರು ಬಾಲಕಿಯ ತಂದೆಯನ್ನು ಕರೆಸಿ ವಿಚಾರಿಸಿದ್ದರೂ, ಮಗುವಿನ ಕುಟುಂಬ ಪೊಲೀಸರು ದೂರು ನೀಡದೆ ಬಿಟ್ಟಿದ್ದರು.

ವಿಡಿಯೋ ವೈರಲ್ ಆಗಿದ ನಂತರ ಜಿಲ್ಲಾಧಿಕಾರಿಗಳ ಮಕ್ಕಳ ರಕ್ಷಣಾ ಘಟಕ ಮಧ್ಯೆ ಪ್ರವೇಶಿಸಿ ಪ್ರಕರಣದ ಮಹತ್ವವನ್ನು ಮನವರಿಕೆ ಮಾಡಿಸಿದೆ. ಪೋಷಕರು ಮೊದಲಿಗೆ ಕೇಸ್ ದಾಖಲಿಸಲು ಸಮ್ಮತಿಸದ ಹಿನ್ನೆಲೆಯಲ್ಲಿ, ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯಡಿ ಸ್ವಯಂಪ್ರೇರಿತ ದೂರು ದಾಖಲಿಸಿ, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತುಫೇಲ್ ಅಹ್ಮದ್ ದಾದಾಫೀರ್ ಮೂಲತಃ ವೇಲ್ಡಿಂಗ್ ಕೆಲಸ ಮಾಡುತ್ತಿದ್ದವನಾಗಿದ್ದು, ಸಮಯ ಸಿಕ್ಕಾಗ ಮಸೀದಿಗಳಲ್ಲಿ ಧಾರ್ಮಿಕ ಭಾಷಣಗಳನ್ನು ನೀಡುತ್ತಿದ್ದ ಎನ್ನಲಾಗಿದೆ.

ಈ ಪ್ರಕರಣವು ಮೌಲ್ವಿಯ ಭಯಾನಕ ಮುಖವೊಂದು ಸಾರ್ವಜನಿಕ ಮುಂದಿಡುವಂತಾಗಿದ್ದು, ಪೊಲೀಸರು ಇದರ ಕುರಿತು ಗಂಭೀರ ತನಿಖೆ ಮುಂದುವರೆಸಿದ್ದಾರೆ. ಜತೆಗೆ, ಈ ರೀತಿಯ ಘಟನೆಗಳು ಹೆಚ್ಚು ವರ್ಷಗಳ ನಂತರ ಬೆಳಕಿಗೆ ಬರುವುದು ಯಾಕೆ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ಬೇಕಾದ ಸಂದರ್ಭ ಉಂಟಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

14 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago