ಬೆಳಗಾವಿ, ಆಗಸ್ಟ್ 6: ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯೊಂದರಲ್ಲಿ 5 ವರ್ಷದ ಬಾಲಕಿಯ ಮೇಲೆ ಮೌಲ್ವಿ ಅತ್ಯಾಚಾರಕ್ಕೆ ಯತ್ನಿಸಿದ ಘೋರ ಘಟನೆ ಎರಡು ವರ್ಷಗಳ ನಂತರ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಇದೀಗ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಈ ಅಪಘಾತ 2023ರ ಅಕ್ಟೋಬರ್ 5ರಂದು ಸಂಭವಿಸಿದ್ದು, ಆರೋಪಿಯಾಗಿರುವ ಮೌಲ್ವಿ ತುಫೇಲ್ ಅಹ್ಮದ್ ದಾದಾಫೀರ್ ವಿರುದ್ಧ ಇದೀಗ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ, ಈ ಪ್ರಕರಣವು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋವೊಂದರಿಂದ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಈ ಪೋಸ್ಟ್ನಲ್ಲಿ ಆಡಿಯೋ ಮತ್ತು ದೃಶ್ಯವೊಂದರ ಮೂಲಕ ಬಾಲಕಿಯ ಮೇಲೆ ವ್ಯಕ್ತಿಯೊಬ್ಬನು ದುಷ್ಟ ಕೃತ್ಯಕ್ಕೆ ಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿತ್ತು.
ಪೋಸ್ಟ್ ಲಭ್ಯವಾದ ಕೂಡಲೇ ಸಿಇಎನ್ ಪೊಲೀಸ್ ಇಲಾಖೆ ಮೂಲಕ ತನಿಖೆ ಆರಂಭಿಸಲಾಗಿದ್ದು, ವಿಡಿಯೋದಲ್ಲಿನ ಸ್ಥಳದ ವಿವರ ಆಧರಿಸಿ ಮುರಗೋಡ ಠಾಣೆಗೆ ಮಾಹಿತಿ ನೀಡಲಾಗಿತ್ತು. ಹೆಚ್ಚಿನ ತನಿಖೆಯಲ್ಲಿ ಪ್ರಕರಣ 2023ರ ಅಕ್ಟೋಬರ್ 5ರಂದು ನಡೆದಿರುವುದು ದೃಢಪಟ್ಟಿದೆ.
ಆರೋಪಿಯು ಮಹಾಲಿಂಗಪುರದಿಂದ ಆಗಮಿಸಿದ ಬಳಿಕ, ತನ್ನ ಸಂಬಂಧಿತ ಮಹಿಳೆಯ ಮನೆಯಲ್ಲಿ ವಾಸ್ತವ್ಯಕ್ಕೆ ಇರುತ್ತಿದ್ದ ವೇಳೆ ಈ ಜಘನ್ಯ ಕೃತ್ಯಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತಕ್ಷಣ ಸ್ಥಳೀಯರು ಬಾಲಕಿಯ ತಂದೆಯನ್ನು ಕರೆಸಿ ವಿಚಾರಿಸಿದ್ದರೂ, ಮಗುವಿನ ಕುಟುಂಬ ಪೊಲೀಸರು ದೂರು ನೀಡದೆ ಬಿಟ್ಟಿದ್ದರು.
ವಿಡಿಯೋ ವೈರಲ್ ಆಗಿದ ನಂತರ ಜಿಲ್ಲಾಧಿಕಾರಿಗಳ ಮಕ್ಕಳ ರಕ್ಷಣಾ ಘಟಕ ಮಧ್ಯೆ ಪ್ರವೇಶಿಸಿ ಪ್ರಕರಣದ ಮಹತ್ವವನ್ನು ಮನವರಿಕೆ ಮಾಡಿಸಿದೆ. ಪೋಷಕರು ಮೊದಲಿಗೆ ಕೇಸ್ ದಾಖಲಿಸಲು ಸಮ್ಮತಿಸದ ಹಿನ್ನೆಲೆಯಲ್ಲಿ, ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯಡಿ ಸ್ವಯಂಪ್ರೇರಿತ ದೂರು ದಾಖಲಿಸಿ, ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ತುಫೇಲ್ ಅಹ್ಮದ್ ದಾದಾಫೀರ್ ಮೂಲತಃ ವೇಲ್ಡಿಂಗ್ ಕೆಲಸ ಮಾಡುತ್ತಿದ್ದವನಾಗಿದ್ದು, ಸಮಯ ಸಿಕ್ಕಾಗ ಮಸೀದಿಗಳಲ್ಲಿ ಧಾರ್ಮಿಕ ಭಾಷಣಗಳನ್ನು ನೀಡುತ್ತಿದ್ದ ಎನ್ನಲಾಗಿದೆ.
ಈ ಪ್ರಕರಣವು ಮೌಲ್ವಿಯ ಭಯಾನಕ ಮುಖವೊಂದು ಸಾರ್ವಜನಿಕ ಮುಂದಿಡುವಂತಾಗಿದ್ದು, ಪೊಲೀಸರು ಇದರ ಕುರಿತು ಗಂಭೀರ ತನಿಖೆ ಮುಂದುವರೆಸಿದ್ದಾರೆ. ಜತೆಗೆ, ಈ ರೀತಿಯ ಘಟನೆಗಳು ಹೆಚ್ಚು ವರ್ಷಗಳ ನಂತರ ಬೆಳಕಿಗೆ ಬರುವುದು ಯಾಕೆ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ಬೇಕಾದ ಸಂದರ್ಭ ಉಂಟಾಗಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…