ಬೆಳಗಾವಿ, ಆಗಸ್ಟ್ 6: ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯೊಂದರಲ್ಲಿ 5 ವರ್ಷದ ಬಾಲಕಿಯ ಮೇಲೆ ಮೌಲ್ವಿ ಅತ್ಯಾಚಾರಕ್ಕೆ ಯತ್ನಿಸಿದ ಘೋರ ಘಟನೆ ಎರಡು ವರ್ಷಗಳ ನಂತರ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಇದೀಗ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಈ ಅಪಘಾತ 2023ರ ಅಕ್ಟೋಬರ್ 5ರಂದು ಸಂಭವಿಸಿದ್ದು, ಆರೋಪಿಯಾಗಿರುವ ಮೌಲ್ವಿ ತುಫೇಲ್ ಅಹ್ಮದ್ ದಾದಾಫೀರ್ ವಿರುದ್ಧ ಇದೀಗ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ, ಈ ಪ್ರಕರಣವು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋವೊಂದರಿಂದ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಈ ಪೋಸ್ಟ್ನಲ್ಲಿ ಆಡಿಯೋ ಮತ್ತು ದೃಶ್ಯವೊಂದರ ಮೂಲಕ ಬಾಲಕಿಯ ಮೇಲೆ ವ್ಯಕ್ತಿಯೊಬ್ಬನು ದುಷ್ಟ ಕೃತ್ಯಕ್ಕೆ ಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿತ್ತು.
ಪೋಸ್ಟ್ ಲಭ್ಯವಾದ ಕೂಡಲೇ ಸಿಇಎನ್ ಪೊಲೀಸ್ ಇಲಾಖೆ ಮೂಲಕ ತನಿಖೆ ಆರಂಭಿಸಲಾಗಿದ್ದು, ವಿಡಿಯೋದಲ್ಲಿನ ಸ್ಥಳದ ವಿವರ ಆಧರಿಸಿ ಮುರಗೋಡ ಠಾಣೆಗೆ ಮಾಹಿತಿ ನೀಡಲಾಗಿತ್ತು. ಹೆಚ್ಚಿನ ತನಿಖೆಯಲ್ಲಿ ಪ್ರಕರಣ 2023ರ ಅಕ್ಟೋಬರ್ 5ರಂದು ನಡೆದಿರುವುದು ದೃಢಪಟ್ಟಿದೆ.
ಆರೋಪಿಯು ಮಹಾಲಿಂಗಪುರದಿಂದ ಆಗಮಿಸಿದ ಬಳಿಕ, ತನ್ನ ಸಂಬಂಧಿತ ಮಹಿಳೆಯ ಮನೆಯಲ್ಲಿ ವಾಸ್ತವ್ಯಕ್ಕೆ ಇರುತ್ತಿದ್ದ ವೇಳೆ ಈ ಜಘನ್ಯ ಕೃತ್ಯಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತಕ್ಷಣ ಸ್ಥಳೀಯರು ಬಾಲಕಿಯ ತಂದೆಯನ್ನು ಕರೆಸಿ ವಿಚಾರಿಸಿದ್ದರೂ, ಮಗುವಿನ ಕುಟುಂಬ ಪೊಲೀಸರು ದೂರು ನೀಡದೆ ಬಿಟ್ಟಿದ್ದರು.
ವಿಡಿಯೋ ವೈರಲ್ ಆಗಿದ ನಂತರ ಜಿಲ್ಲಾಧಿಕಾರಿಗಳ ಮಕ್ಕಳ ರಕ್ಷಣಾ ಘಟಕ ಮಧ್ಯೆ ಪ್ರವೇಶಿಸಿ ಪ್ರಕರಣದ ಮಹತ್ವವನ್ನು ಮನವರಿಕೆ ಮಾಡಿಸಿದೆ. ಪೋಷಕರು ಮೊದಲಿಗೆ ಕೇಸ್ ದಾಖಲಿಸಲು ಸಮ್ಮತಿಸದ ಹಿನ್ನೆಲೆಯಲ್ಲಿ, ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯಡಿ ಸ್ವಯಂಪ್ರೇರಿತ ದೂರು ದಾಖಲಿಸಿ, ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ತುಫೇಲ್ ಅಹ್ಮದ್ ದಾದಾಫೀರ್ ಮೂಲತಃ ವೇಲ್ಡಿಂಗ್ ಕೆಲಸ ಮಾಡುತ್ತಿದ್ದವನಾಗಿದ್ದು, ಸಮಯ ಸಿಕ್ಕಾಗ ಮಸೀದಿಗಳಲ್ಲಿ ಧಾರ್ಮಿಕ ಭಾಷಣಗಳನ್ನು ನೀಡುತ್ತಿದ್ದ ಎನ್ನಲಾಗಿದೆ.
ಈ ಪ್ರಕರಣವು ಮೌಲ್ವಿಯ ಭಯಾನಕ ಮುಖವೊಂದು ಸಾರ್ವಜನಿಕ ಮುಂದಿಡುವಂತಾಗಿದ್ದು, ಪೊಲೀಸರು ಇದರ ಕುರಿತು ಗಂಭೀರ ತನಿಖೆ ಮುಂದುವರೆಸಿದ್ದಾರೆ. ಜತೆಗೆ, ಈ ರೀತಿಯ ಘಟನೆಗಳು ಹೆಚ್ಚು ವರ್ಷಗಳ ನಂತರ ಬೆಳಕಿಗೆ ಬರುವುದು ಯಾಕೆ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ಬೇಕಾದ ಸಂದರ್ಭ ಉಂಟಾಗಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…