ಚಾಮರಾಜನಗರ, ಮೇ 30 – ಗ್ಯಾಸ್ ಸಿಲಿಂಡರ್ ಡೆಲಿವರಿ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಪ್ರವೇಶಿಸಿದ ವ್ಯಕ್ತಿ, ಆಕೆಯ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾದ ದುರ್ಘಟನೆ ಚಾಮರಾಜನಗರ ತಾಲ್ಲೂಕಿನ ಸಂತಮಾರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಮಹೇಶ್ ಎಂಬಾತ ಗ್ಯಾಸ್ ಏಜೆನ್ಸಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದನು. ಈತ, ಸಿಲಿಂಡರ್ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ. ಮಹಿಳೆ ಸಿಲಿಂಡರ್ ಬುಕ್ ಮಾಡಿಲ್ಲವೆಂದು ತಿಳಿಸಿದ್ದರೂ, “ಗ್ಯಾಸ್ ಖಾಲಿಯಾದರೆ ಇಟ್ಟುಕೊಳ್ಳಿ” ಎಂದು ಬಲವಂತವಾಗಿ ಒತ್ತಾಯಿಸಿದ ಮಹೇಶ್ ಅವರ ಮಾತಿಗೆ ಮಡಿದು ಮಹಿಳೆ 950 ರೂ. ನೀಡಿ ಸಿಲಿಂಡರ್ ಪಡೆದುಕೊಂಡಿದ್ದರು.
ಆದರೆ ಬಳಿಕವೂ ಸ್ಥಳ ತೊರೆಯದ ಆರೋಪಿಯು, ಅಡುಗೆ ಮನೆಗೆ ಸರಿಯಾಗಿ ಬೆಳಕು ಬರುತ್ತಿದೆಯೇ ಎಂದು ತಪಾಸಣೆ ಮಾಡುವ ನೆಪದಲ್ಲಿ ಫೋಟೋ ತೆಗೆದು, ಇ-ಕೆವೈಸಿಗಾಗಿ ಬೇಕು ಎಂದು ಮನವಿ ಮಾಡಿದ. ಮನೆಯೊಳಗೆ ನುಗ್ಗಿದ ಮಹೇಶ್, ಅಡುಗೆ ಮನೆಗೆ ಮಹಿಳೆಯನ್ನು ಕರೆದುಕೊಂಡು ಹೋಗಿ, ಆಕೆಯ ಭಾವನೆಗಳ ಜೊತೆ ಆಟವಾಡುತ್ತಾ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಪ್ರತಿರೋಧ ತೋರಿದ ಮಹಿಳೆಯನ್ನು ಬೆದರಿಸುವ ಮೂಲಕ, ಕೊಲೆಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ ತಕ್ಷಣದ ವೇಳೆ ಚಾಕುವಿನಿಂದ ಹಲ್ಲೆಗೂ ಮುಂದಾಗಿದ್ದಾನೆ ಎಂಬ ಆರೋಪ ಇದೆ.
ಘಟನೆ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಸಂತಮಾರಹಳ್ಳಿ ಪೊಲೀಸರು ಮಹೇಶ್ ವಿರುದ್ಧ ಪಿಡಿಇ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಸ್ಥಳೀಯರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಸುರಕ್ಷತೆ ಕುರಿತು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂಬ ಮಾತು ಕೇಳಿಬರುತ್ತಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…