ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ನಟ ಮಡೆನೂರು ಮನು ಇದೀಗ ಸಂಕಟದ ಸ್ಥಿತಿಗೆ ತಲುಪಿದ್ದಾರೆ.
ಆಡಿಯೋ ವೈರಲ್ ಆದ ಬಳಿಕ ಶಿವರಾಜ್ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮನು ವಿರುದ್ಧ ಆಕ್ರೋಶದ ಸುರಿಮಳೆ ಸುರಿದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮನು, “ಆ ವಿಡಿಯೋ ನನ್ನದ್ದಲ್ಲ. ಯಾರೋ ಕುಯುಕ್ತ ಉದ್ದೇಶದಿಂದ ಎಡಿಟ್ ಮಾಡಿದ ಆಡಿಯೋ ಅದು,” ಎಂದು ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದಾರೆ.
ಇದೀಗ, ವಿವಾದಕ್ಕೆ ತೆರೆ ಹಾಕಲು ಮನು ಮೆಚ್ಚಿನ ಹೀರೋ ಶಿವರಾಜ್ಕುಮಾರ್ ಅವರಲ್ಲಿ ನೇರವಾಗಿ ಕ್ಷಮೆ ಕೇಳಲು ಮುಂದಾಗಿದ್ದಾರೆ. ಆದರೆ ಅವರು ಶಿವಣ್ಣನನ್ನು ಭೇಟಿಯಾಗಲು ವಿಫಲವಾಗಿದ್ದಾರೆ.
ಅದರಿಂದ ಇಂದು ಬೆಳಿಗ್ಗೆಯಿಂದಲೇ ಮನು ಕುಟುಂಬ ಸಮೇತರಾಗಿ ಶಿವಣ್ಣ ನಿವಾಸದ ಎದುರು ಕಾಯುತ್ತಿದ್ದಾರೆ. “ನಾನು ಅವ್ರ ಫ್ಯಾನ್, ಅವರ ವಿರುದ್ಧ ನಾನೇನು ತಪ್ಪು ಮಾತು ಮಾತನಾಡಿಲ್ಲ. ಆದರೆ ಅವರ ಭಾವನೆಗೆ ಗಾಯವಾಗಿದೆ ಎಂದಾದರೆ ಕ್ಷಮೆ ಕೇಳುತ್ತೇನೆ,” ಎಂದು ಮಾಧ್ಯಮದವರೊಡನೆ ಮನು ಮಾತನಾಡಿದ್ದಾರೆ.
ಈ ಸಂಪೂರ್ಣ ಘಟನೆಯ ವಿಡಿಯೋ ಈಗ ವೈರಲ್ ಆಗಿದ್ದು, ಮನು ಕುಟುಂಬದ ತೀವ್ರ ಸಂಕಟ ಹಾಗೂ ಮಾನಸಿಕ ಒತ್ತಡವನ್ನೂ ಬಿಚ್ಚಿಡುತ್ತಿದೆ. ಆದರೆ ಈ ಕುರಿತು ಶಿವರಾಜ್ಕುಮಾರ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…