ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ನಟ ಮಡೆನೂರು ಮನು ಇದೀಗ ಸಂಕಟದ ಸ್ಥಿತಿಗೆ ತಲುಪಿದ್ದಾರೆ.
ಆಡಿಯೋ ವೈರಲ್ ಆದ ಬಳಿಕ ಶಿವರಾಜ್ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮನು ವಿರುದ್ಧ ಆಕ್ರೋಶದ ಸುರಿಮಳೆ ಸುರಿದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮನು, “ಆ ವಿಡಿಯೋ ನನ್ನದ್ದಲ್ಲ. ಯಾರೋ ಕುಯುಕ್ತ ಉದ್ದೇಶದಿಂದ ಎಡಿಟ್ ಮಾಡಿದ ಆಡಿಯೋ ಅದು,” ಎಂದು ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದಾರೆ.
ಇದೀಗ, ವಿವಾದಕ್ಕೆ ತೆರೆ ಹಾಕಲು ಮನು ಮೆಚ್ಚಿನ ಹೀರೋ ಶಿವರಾಜ್ಕುಮಾರ್ ಅವರಲ್ಲಿ ನೇರವಾಗಿ ಕ್ಷಮೆ ಕೇಳಲು ಮುಂದಾಗಿದ್ದಾರೆ. ಆದರೆ ಅವರು ಶಿವಣ್ಣನನ್ನು ಭೇಟಿಯಾಗಲು ವಿಫಲವಾಗಿದ್ದಾರೆ.
ಅದರಿಂದ ಇಂದು ಬೆಳಿಗ್ಗೆಯಿಂದಲೇ ಮನು ಕುಟುಂಬ ಸಮೇತರಾಗಿ ಶಿವಣ್ಣ ನಿವಾಸದ ಎದುರು ಕಾಯುತ್ತಿದ್ದಾರೆ. “ನಾನು ಅವ್ರ ಫ್ಯಾನ್, ಅವರ ವಿರುದ್ಧ ನಾನೇನು ತಪ್ಪು ಮಾತು ಮಾತನಾಡಿಲ್ಲ. ಆದರೆ ಅವರ ಭಾವನೆಗೆ ಗಾಯವಾಗಿದೆ ಎಂದಾದರೆ ಕ್ಷಮೆ ಕೇಳುತ್ತೇನೆ,” ಎಂದು ಮಾಧ್ಯಮದವರೊಡನೆ ಮನು ಮಾತನಾಡಿದ್ದಾರೆ.
ಈ ಸಂಪೂರ್ಣ ಘಟನೆಯ ವಿಡಿಯೋ ಈಗ ವೈರಲ್ ಆಗಿದ್ದು, ಮನು ಕುಟುಂಬದ ತೀವ್ರ ಸಂಕಟ ಹಾಗೂ ಮಾನಸಿಕ ಒತ್ತಡವನ್ನೂ ಬಿಚ್ಚಿಡುತ್ತಿದೆ. ಆದರೆ ಈ ಕುರಿತು ಶಿವರಾಜ್ಕುಮಾರ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…