Latest

ಉಡುಪಿಯಲ್ಲಿ ಆಡಿಯೋ ವೈರಲ್ ವಿವಾದ: ಸ್ನೇಹಿತರಿಂದಲೇ ಪೈಂಟರ್ ಬರ್ಬರ ಹತ್ಯೆ”

ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಆಡಿಯೋ ಕ್ಲಿಪ್‌ನ್ನು ವೈರಲ್ ಮಾಡಿದ ದ್ವೇಷಕ್ಕೆ, ಮೂವರು ಸ್ನೇಹಿತರು ಸೇರಿ ಸ್ಥಳೀಯ ವ್ಯಕ್ತಿಯನ್ನು ಮನೆಗೆ ನುಗ್ಗಿ ಹತ್ಯೆಗೈದ ಘಟನೆ ಆಗಸ್ಟ್ 12ರ ರಾತ್ರಿ 11:30ರ ಸುಮಾರಿಗೆ ನಡೆದಿದೆ.

ಹತ್ಯೆಯಾದವರು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40). ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಅವರು, ಮಂಗಳವಾರ ವೈಯಕ್ತಿಕ ಕೆಲಸಕ್ಕಾಗಿ ಉಡುಪಿಗೆ ತೆರಳಿ, ಸಂಜೆ ಮನೆಗೆ ಮರಳಿ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಮಧ್ಯರಾತ್ರಿ, ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳು ಅಜಿತ್ (28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಮನೆಗೆ ನುಗ್ಗಿ, ಎಲ್ಲೆಡೆ ಹುಡುಕಾಟ ನಡೆಸಿ ವಿನಯ್ ಇದ್ದ ಕೋಣೆಯವರೆಗೆ ಬಂದರು. ಶಬ್ದದಿಂದ ಎಚ್ಚರಗೊಂಡ ವಿನಯ್‌ನ್ನು ಅವರು ಹಿಡಿದು, ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದರು. ಅಜಿತ್ ವಿನಯ್‌ನ್ನು ಬಿಗಿಯಾಗಿ ಹಿಡಿದಿದ್ದರೆ, ಅಕ್ಷೇಂದ್ರ ಮತ್ತು ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ತಲೆಗೆ ಭೀಕರವಾಗಿ ಹಲ್ಲೆ ನಡೆಸಿದರು. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ವಿನಯ್ ಸಾವನ್ನಪ್ಪಿದರು.

ಘಟನೆಯ ನಂತರ ಆರೋಪಿಗಳು ಸ್ಕೂಟರ್‌ನಲ್ಲಿ ಸ್ಥಳದಿಂದ ಪರಾರಿಯಾದರೂ, ಬಳಿಕ ಉಡುಪಿ ನಗರ ಪೊಲೀಸ್ ಠಾಣೆಗೆ ಶರಣಾಗಿ ಬಂಧಿತರಾದರು.

ಪೊಲೀಸ್ ಮೂಲಗಳ ಪ್ರಕಾರ, ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದ ಆಡಿಯೋವನ್ನು ವಿನಯ್ ಇತರರಿಗೆ ಶೇರ್ ಮಾಡಿದ್ದು, ಅದು ವೈರಲ್ ಆದ ಕಾರಣದಿಂದಲೇ ಈ ಹತ್ಯೆ ನಡೆದಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

20 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

21 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago