ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಆಡಿಯೋ ಕ್ಲಿಪ್ನ್ನು ವೈರಲ್ ಮಾಡಿದ ದ್ವೇಷಕ್ಕೆ, ಮೂವರು ಸ್ನೇಹಿತರು ಸೇರಿ ಸ್ಥಳೀಯ ವ್ಯಕ್ತಿಯನ್ನು ಮನೆಗೆ ನುಗ್ಗಿ ಹತ್ಯೆಗೈದ ಘಟನೆ ಆಗಸ್ಟ್ 12ರ ರಾತ್ರಿ 11:30ರ ಸುಮಾರಿಗೆ ನಡೆದಿದೆ.
ಹತ್ಯೆಯಾದವರು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40). ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಅವರು, ಮಂಗಳವಾರ ವೈಯಕ್ತಿಕ ಕೆಲಸಕ್ಕಾಗಿ ಉಡುಪಿಗೆ ತೆರಳಿ, ಸಂಜೆ ಮನೆಗೆ ಮರಳಿ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಮಧ್ಯರಾತ್ರಿ, ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳು ಅಜಿತ್ (28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಮನೆಗೆ ನುಗ್ಗಿ, ಎಲ್ಲೆಡೆ ಹುಡುಕಾಟ ನಡೆಸಿ ವಿನಯ್ ಇದ್ದ ಕೋಣೆಯವರೆಗೆ ಬಂದರು. ಶಬ್ದದಿಂದ ಎಚ್ಚರಗೊಂಡ ವಿನಯ್ನ್ನು ಅವರು ಹಿಡಿದು, ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದರು. ಅಜಿತ್ ವಿನಯ್ನ್ನು ಬಿಗಿಯಾಗಿ ಹಿಡಿದಿದ್ದರೆ, ಅಕ್ಷೇಂದ್ರ ಮತ್ತು ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ತಲೆಗೆ ಭೀಕರವಾಗಿ ಹಲ್ಲೆ ನಡೆಸಿದರು. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ವಿನಯ್ ಸಾವನ್ನಪ್ಪಿದರು.
ಘಟನೆಯ ನಂತರ ಆರೋಪಿಗಳು ಸ್ಕೂಟರ್ನಲ್ಲಿ ಸ್ಥಳದಿಂದ ಪರಾರಿಯಾದರೂ, ಬಳಿಕ ಉಡುಪಿ ನಗರ ಪೊಲೀಸ್ ಠಾಣೆಗೆ ಶರಣಾಗಿ ಬಂಧಿತರಾದರು.
ಪೊಲೀಸ್ ಮೂಲಗಳ ಪ್ರಕಾರ, ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದ ಆಡಿಯೋವನ್ನು ವಿನಯ್ ಇತರರಿಗೆ ಶೇರ್ ಮಾಡಿದ್ದು, ಅದು ವೈರಲ್ ಆದ ಕಾರಣದಿಂದಲೇ ಈ ಹತ್ಯೆ ನಡೆದಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…