Latest

ತುಕಾರಾಮ್ ಎಂಬ ತುಕಾಲಿ ಹಿಂದೆ ಬಂದ ಆಂಟಿ ಡ್ರಮ್ಮು ಸೇರಿದಳು!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೇರಗಾಂವ್ ಮೂಲದವನಾದ ತುಕಾರಾಂ ದಾಂಡೇಲಿಗೆ ಮದುವೆ ಕಾರ್ಯಕ್ರಮ ಒಂದಕ್ಕೆ ಫೋಟೋಗ್ರಾಫರ್ ಆಗಿ ಹೋಗಿದ್ದು ಅಲ್ಲಿ ಎರಡು ಮಕ್ಕಳ ತಾಯಿಯಾದಂತಹ ಶಾಂತಕುಮಾರಿ ಎಂಬಾಕೆಯನ್ನು ಕಂಡಿರುತ್ತಾನೆ.  ನಂತರ ಅವರಿಬ್ಬರ ಮಧ್ಯೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿರುತ್ತದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ಶಾಂತಕುಮಾರಿ ಗಂಡನನ್ನು ಬಿಟ್ಟು, ತುಕಾರಾಮನ ಜೊತೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ  ತೇರಗಾಂವ್ ಎಂಬ ಹಳ್ಳಿಗೆ ಓಡಿ ಹೋಗಿ ಜೀವನ ನಡೆಸುತ್ತಿರುತ್ತಾಳೆ. ಈ ರೀತಿ ಓಡಿ ಹೋದ ಬಳಿಕ ಎರಡು ವರ್ಷಗಳ ಕಾಲ ಸುಖವಾಗಿಯೇ ಇರುತ್ತಾರೆ ಇದರ ಮಧ್ಯೆ ಶಾಂತಕುಮಾರಿಗೆ ತುಕಾರಾಮನ ಮೇಲೆ ಅನುಮಾನ ಹುಟ್ಟಲು ಆರಂಭಿಸುತ್ತದೆ. ತುಕಾರಾಮ ಮಹಿಳೆಯರ ಜೊತೆ ಸಾಮಾನ್ಯವಾಗಿ ಮಾತನಾಡಿದರು ಸಹ ಶಾಂತಕುಮಾರಿ ಅನುಮಾನ ಪಡುತ್ತಿದ್ದಳು. ಈ ವಿಚಾರವಾಗಿ ತುಕಾರಾಂ ಬೇಸತ್ತು ಹೋಗಿರುತ್ತಾನೆ. ಒಂದು ಕಡೆ ಆಕೆಯ ಅನುಮಾನದ ಹುಚ್ಚು ಹೆಚ್ಚಾಗುತ್ತಿದ್ದಂತೆ ಇತ್ತ ಈತ ತಾಳ್ಮೆಯನ್ನು ಕಳೆದುಕೊಳ್ಳುತ್ತಾ ಹೋಗುತ್ತಾನೆ. ಹೆಂಡತಿಗೆ ಅನುಮಾನ ಹೆಚ್ಚಾಗಬಾರದು ಗಂಡನಿಗೆ ಕೋಪ ಮಿತಿಮೀರ ಬಾರದು ಎರಡು ಹುಚ್ಚೆದ್ದು ಕುಣಿದರೆ ಏನಾಗಬಹುದು ಅಂತಹದೊಂದು ಘಟನೆ ಇವರಿಬ್ಬರ ನಡುವೆ ನಡೆದಿದೆ. ಆಕೆಯ ಅನುಮಾನದ ಹುಚ್ಚನ್ನು ತಾಳಲಾರದ ತುಕಾರಾಂ ತುಕಾಲಿ ಕೆಲಸ ಒಂದಕ್ಕೆ ಮುಂದಾಗುತ್ತಾನೆ.
ಅದೇನೆಂದರೆ, ಆಕೆ ಗಂಡನನ್ನು ಬಿಟ್ಟು ಈತನ ಜೊತೆ ಪ್ರೀತಿ ಮಾಡಿ ಓಡಿ ಬಂದಿದ್ದರೂ ಸಹ ಈ ಎಲ್ಲಾ ವಿಚಾರಗಳನ್ನು ಮರೆತು ಆಕೆಯನ್ನೇ ಕೊಲೆ ಮಾಡಲು ಸ್ಕೆಚ್ ಹಾಕುತ್ತಾನೆ. ಫೆಬ್ರವರಿ 22ನೇ ತಾರೀಖಿನಂದು ಶಾಂತಕುಮಾರಿಯನ್ನು ಕೊಂದ ತುಕಾರಾಂ ಮನೆಯಲ್ಲೇ ಇರುವಂತಹ ಡ್ರಮ್ಮಿನ ಒಳಗೆ ಮುಚ್ಚಿ ಇಡುತ್ತಾನೆ. ನಂತರ ರಾತ್ರಿಯೆಲ್ಲ ಉಪಾಯ ಮಾಡಿ ಮರುದಿನ ವಾಹನವನ್ನು ಕರೆಸಿ ಚಾಲಕ ಹಾಗೂ ಒಬ್ಬ ಹಮಾಲಿಯ ಸಹಾಯ ಪಡೆದು ಕಸ ಎಸೆಯಬೇಕೆಂದು ಕರೆದುಕೊಂಡು ಹೋಗಿ ಡ್ರಮ್ಮಿನಲ್ಲಿರುವಂತಹ ಶಾಂತಕುಮಾರಿ ದೇಹವನ್ನು ಕಾಡಿನಲ್ಲಿ ಎಸೆದು ಬರುತ್ತಾನೆ. ಸ್ಥಳೀಯರು ಅನುಮಾನಗೊಂಡು ಮೊದಲೇ ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ. ಇವರು ಹಿಂತಿರುಗಿ ಬರುವಷ್ಟರಲ್ಲಿ ಪೊಲೀಸರು ತುಕಾರಾಮನಿಗಾಗಿ ಹೊಂಚು ಹಾಕಿಕೊಂಡು ಕಾಯುತ್ತಾ ಕುಳಿತಿರುತ್ತಾರೆ.  ಶವವನ್ನು ಎಸೆದು ಬಂದ ತುಕಾರಾಂ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

2 minutes ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

3 minutes ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

13 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

13 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

13 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

14 hours ago