Latest

ತುಕಾರಾಮ್ ಎಂಬ ತುಕಾಲಿ ಹಿಂದೆ ಬಂದ ಆಂಟಿ ಡ್ರಮ್ಮು ಸೇರಿದಳು!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೇರಗಾಂವ್ ಮೂಲದವನಾದ ತುಕಾರಾಂ ದಾಂಡೇಲಿಗೆ ಮದುವೆ ಕಾರ್ಯಕ್ರಮ ಒಂದಕ್ಕೆ ಫೋಟೋಗ್ರಾಫರ್ ಆಗಿ ಹೋಗಿದ್ದು ಅಲ್ಲಿ ಎರಡು ಮಕ್ಕಳ ತಾಯಿಯಾದಂತಹ ಶಾಂತಕುಮಾರಿ ಎಂಬಾಕೆಯನ್ನು ಕಂಡಿರುತ್ತಾನೆ.  ನಂತರ ಅವರಿಬ್ಬರ ಮಧ್ಯೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿರುತ್ತದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ಶಾಂತಕುಮಾರಿ ಗಂಡನನ್ನು ಬಿಟ್ಟು, ತುಕಾರಾಮನ ಜೊತೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ  ತೇರಗಾಂವ್ ಎಂಬ ಹಳ್ಳಿಗೆ ಓಡಿ ಹೋಗಿ ಜೀವನ ನಡೆಸುತ್ತಿರುತ್ತಾಳೆ. ಈ ರೀತಿ ಓಡಿ ಹೋದ ಬಳಿಕ ಎರಡು ವರ್ಷಗಳ ಕಾಲ ಸುಖವಾಗಿಯೇ ಇರುತ್ತಾರೆ ಇದರ ಮಧ್ಯೆ ಶಾಂತಕುಮಾರಿಗೆ ತುಕಾರಾಮನ ಮೇಲೆ ಅನುಮಾನ ಹುಟ್ಟಲು ಆರಂಭಿಸುತ್ತದೆ. ತುಕಾರಾಮ ಮಹಿಳೆಯರ ಜೊತೆ ಸಾಮಾನ್ಯವಾಗಿ ಮಾತನಾಡಿದರು ಸಹ ಶಾಂತಕುಮಾರಿ ಅನುಮಾನ ಪಡುತ್ತಿದ್ದಳು. ಈ ವಿಚಾರವಾಗಿ ತುಕಾರಾಂ ಬೇಸತ್ತು ಹೋಗಿರುತ್ತಾನೆ. ಒಂದು ಕಡೆ ಆಕೆಯ ಅನುಮಾನದ ಹುಚ್ಚು ಹೆಚ್ಚಾಗುತ್ತಿದ್ದಂತೆ ಇತ್ತ ಈತ ತಾಳ್ಮೆಯನ್ನು ಕಳೆದುಕೊಳ್ಳುತ್ತಾ ಹೋಗುತ್ತಾನೆ. ಹೆಂಡತಿಗೆ ಅನುಮಾನ ಹೆಚ್ಚಾಗಬಾರದು ಗಂಡನಿಗೆ ಕೋಪ ಮಿತಿಮೀರ ಬಾರದು ಎರಡು ಹುಚ್ಚೆದ್ದು ಕುಣಿದರೆ ಏನಾಗಬಹುದು ಅಂತಹದೊಂದು ಘಟನೆ ಇವರಿಬ್ಬರ ನಡುವೆ ನಡೆದಿದೆ. ಆಕೆಯ ಅನುಮಾನದ ಹುಚ್ಚನ್ನು ತಾಳಲಾರದ ತುಕಾರಾಂ ತುಕಾಲಿ ಕೆಲಸ ಒಂದಕ್ಕೆ ಮುಂದಾಗುತ್ತಾನೆ.
ಅದೇನೆಂದರೆ, ಆಕೆ ಗಂಡನನ್ನು ಬಿಟ್ಟು ಈತನ ಜೊತೆ ಪ್ರೀತಿ ಮಾಡಿ ಓಡಿ ಬಂದಿದ್ದರೂ ಸಹ ಈ ಎಲ್ಲಾ ವಿಚಾರಗಳನ್ನು ಮರೆತು ಆಕೆಯನ್ನೇ ಕೊಲೆ ಮಾಡಲು ಸ್ಕೆಚ್ ಹಾಕುತ್ತಾನೆ. ಫೆಬ್ರವರಿ 22ನೇ ತಾರೀಖಿನಂದು ಶಾಂತಕುಮಾರಿಯನ್ನು ಕೊಂದ ತುಕಾರಾಂ ಮನೆಯಲ್ಲೇ ಇರುವಂತಹ ಡ್ರಮ್ಮಿನ ಒಳಗೆ ಮುಚ್ಚಿ ಇಡುತ್ತಾನೆ. ನಂತರ ರಾತ್ರಿಯೆಲ್ಲ ಉಪಾಯ ಮಾಡಿ ಮರುದಿನ ವಾಹನವನ್ನು ಕರೆಸಿ ಚಾಲಕ ಹಾಗೂ ಒಬ್ಬ ಹಮಾಲಿಯ ಸಹಾಯ ಪಡೆದು ಕಸ ಎಸೆಯಬೇಕೆಂದು ಕರೆದುಕೊಂಡು ಹೋಗಿ ಡ್ರಮ್ಮಿನಲ್ಲಿರುವಂತಹ ಶಾಂತಕುಮಾರಿ ದೇಹವನ್ನು ಕಾಡಿನಲ್ಲಿ ಎಸೆದು ಬರುತ್ತಾನೆ. ಸ್ಥಳೀಯರು ಅನುಮಾನಗೊಂಡು ಮೊದಲೇ ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ. ಇವರು ಹಿಂತಿರುಗಿ ಬರುವಷ್ಟರಲ್ಲಿ ಪೊಲೀಸರು ತುಕಾರಾಮನಿಗಾಗಿ ಹೊಂಚು ಹಾಕಿಕೊಂಡು ಕಾಯುತ್ತಾ ಕುಳಿತಿರುತ್ತಾರೆ.  ಶವವನ್ನು ಎಸೆದು ಬಂದ ತುಕಾರಾಂ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗಂಗಾಜಲ ಹಿಡಿದು ಲಂಚ ಹಂಚಿಕೆ ಪ್ರಮಾಣ! ಶಹಜಹಾನ್‌ಪುರ ಕಾರ್ಪೊರೇಟರ್‌ಗಳ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳು ಗಂಗಾಜಲವನ್ನು ಕೈಯಲ್ಲಿ ಹಿಡಿದು ಲಂಚದ ಹಣವನ್ನು ತಮ್ಮ ನಡುವೆ…

8 hours ago

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಮೂರು FIR, ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಬಸವನಗುಡಿಯ ಎನ್‌.ಆರ್‌. ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

8 hours ago

ಮಗಳ ಮುಂದೆಯೇ ಲೈಂಗಿಕ ಕೃತ್ಯ: ಪತ್ನಿಯ ಖಾಸಗಿ ವಿಡಿಯೋ ಅಪ್‌ಲೋಡ್ ಆರೋಪ, ಪತಿ ಬಂಧನ

ಕೊಲ್ಲಂ: ನಾಗರಿಕ ಸಮಾಜವೇ ಬೆಚ್ಚಿಬೀಳುವಂತಹ ಪ್ರಕರಣವೊಂದು ಕೇರಳದ ಕೊಲ್ಲಂನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಖಾಸಗಿ ವಿಡಿಯೋಗಳನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್…

8 hours ago

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

2 days ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

2 days ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

3 days ago