Latest

ತುಕಾರಾಮ್ ಎಂಬ ತುಕಾಲಿ ಹಿಂದೆ ಬಂದ ಆಂಟಿ ಡ್ರಮ್ಮು ಸೇರಿದಳು!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೇರಗಾಂವ್ ಮೂಲದವನಾದ ತುಕಾರಾಂ ದಾಂಡೇಲಿಗೆ ಮದುವೆ ಕಾರ್ಯಕ್ರಮ ಒಂದಕ್ಕೆ ಫೋಟೋಗ್ರಾಫರ್ ಆಗಿ ಹೋಗಿದ್ದು ಅಲ್ಲಿ ಎರಡು ಮಕ್ಕಳ ತಾಯಿಯಾದಂತಹ ಶಾಂತಕುಮಾರಿ ಎಂಬಾಕೆಯನ್ನು ಕಂಡಿರುತ್ತಾನೆ.  ನಂತರ ಅವರಿಬ್ಬರ ಮಧ್ಯೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿರುತ್ತದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ಶಾಂತಕುಮಾರಿ ಗಂಡನನ್ನು ಬಿಟ್ಟು, ತುಕಾರಾಮನ ಜೊತೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ  ತೇರಗಾಂವ್ ಎಂಬ ಹಳ್ಳಿಗೆ ಓಡಿ ಹೋಗಿ ಜೀವನ ನಡೆಸುತ್ತಿರುತ್ತಾಳೆ. ಈ ರೀತಿ ಓಡಿ ಹೋದ ಬಳಿಕ ಎರಡು ವರ್ಷಗಳ ಕಾಲ ಸುಖವಾಗಿಯೇ ಇರುತ್ತಾರೆ ಇದರ ಮಧ್ಯೆ ಶಾಂತಕುಮಾರಿಗೆ ತುಕಾರಾಮನ ಮೇಲೆ ಅನುಮಾನ ಹುಟ್ಟಲು ಆರಂಭಿಸುತ್ತದೆ. ತುಕಾರಾಮ ಮಹಿಳೆಯರ ಜೊತೆ ಸಾಮಾನ್ಯವಾಗಿ ಮಾತನಾಡಿದರು ಸಹ ಶಾಂತಕುಮಾರಿ ಅನುಮಾನ ಪಡುತ್ತಿದ್ದಳು. ಈ ವಿಚಾರವಾಗಿ ತುಕಾರಾಂ ಬೇಸತ್ತು ಹೋಗಿರುತ್ತಾನೆ. ಒಂದು ಕಡೆ ಆಕೆಯ ಅನುಮಾನದ ಹುಚ್ಚು ಹೆಚ್ಚಾಗುತ್ತಿದ್ದಂತೆ ಇತ್ತ ಈತ ತಾಳ್ಮೆಯನ್ನು ಕಳೆದುಕೊಳ್ಳುತ್ತಾ ಹೋಗುತ್ತಾನೆ. ಹೆಂಡತಿಗೆ ಅನುಮಾನ ಹೆಚ್ಚಾಗಬಾರದು ಗಂಡನಿಗೆ ಕೋಪ ಮಿತಿಮೀರ ಬಾರದು ಎರಡು ಹುಚ್ಚೆದ್ದು ಕುಣಿದರೆ ಏನಾಗಬಹುದು ಅಂತಹದೊಂದು ಘಟನೆ ಇವರಿಬ್ಬರ ನಡುವೆ ನಡೆದಿದೆ. ಆಕೆಯ ಅನುಮಾನದ ಹುಚ್ಚನ್ನು ತಾಳಲಾರದ ತುಕಾರಾಂ ತುಕಾಲಿ ಕೆಲಸ ಒಂದಕ್ಕೆ ಮುಂದಾಗುತ್ತಾನೆ.
ಅದೇನೆಂದರೆ, ಆಕೆ ಗಂಡನನ್ನು ಬಿಟ್ಟು ಈತನ ಜೊತೆ ಪ್ರೀತಿ ಮಾಡಿ ಓಡಿ ಬಂದಿದ್ದರೂ ಸಹ ಈ ಎಲ್ಲಾ ವಿಚಾರಗಳನ್ನು ಮರೆತು ಆಕೆಯನ್ನೇ ಕೊಲೆ ಮಾಡಲು ಸ್ಕೆಚ್ ಹಾಕುತ್ತಾನೆ. ಫೆಬ್ರವರಿ 22ನೇ ತಾರೀಖಿನಂದು ಶಾಂತಕುಮಾರಿಯನ್ನು ಕೊಂದ ತುಕಾರಾಂ ಮನೆಯಲ್ಲೇ ಇರುವಂತಹ ಡ್ರಮ್ಮಿನ ಒಳಗೆ ಮುಚ್ಚಿ ಇಡುತ್ತಾನೆ. ನಂತರ ರಾತ್ರಿಯೆಲ್ಲ ಉಪಾಯ ಮಾಡಿ ಮರುದಿನ ವಾಹನವನ್ನು ಕರೆಸಿ ಚಾಲಕ ಹಾಗೂ ಒಬ್ಬ ಹಮಾಲಿಯ ಸಹಾಯ ಪಡೆದು ಕಸ ಎಸೆಯಬೇಕೆಂದು ಕರೆದುಕೊಂಡು ಹೋಗಿ ಡ್ರಮ್ಮಿನಲ್ಲಿರುವಂತಹ ಶಾಂತಕುಮಾರಿ ದೇಹವನ್ನು ಕಾಡಿನಲ್ಲಿ ಎಸೆದು ಬರುತ್ತಾನೆ. ಸ್ಥಳೀಯರು ಅನುಮಾನಗೊಂಡು ಮೊದಲೇ ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ. ಇವರು ಹಿಂತಿರುಗಿ ಬರುವಷ್ಟರಲ್ಲಿ ಪೊಲೀಸರು ತುಕಾರಾಮನಿಗಾಗಿ ಹೊಂಚು ಹಾಕಿಕೊಂಡು ಕಾಯುತ್ತಾ ಕುಳಿತಿರುತ್ತಾರೆ.  ಶವವನ್ನು ಎಸೆದು ಬಂದ ತುಕಾರಾಂ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

5 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

9 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago