Latest

ಕುಡಿದ ಮತ್ತಿನಲ್ಲಿ ಪಾನ್ ಶಾಪ್ ಅಂಗಡಿ ಮಾಲೀಕನಿಂದ ಹಲ್ಲೆ ಮಾಡಿಸಿಕೊಂಡು ಆಸ್ಪತ್ರೆ ಸೇರಿದ ಆಟೋ ಚಾಲಕ.

ಮದ್ಯಪಾನ ಮಾಡಿ ನಿಶೆಯಲ್ಲಿ ಪಾನಶಾಪ್ ಅಂಗಡಿಗೆ ಹೋಗಿ ಬೇಕಾಗಿದ್ದನ್ನ ಪಡೆದು ಕೊಂಡಿದ್ದಾನೆ ನಂತರ ಪಾನ್ ಶಾಪ್ ಅಂಗಡಿ ಮಾಲೀಕ ಹಣ ಕೊಡಿ ಎಂದರೇ ಮದ್ಯಪಾನ ಮಾಡಿದ್ದ ಆಟೋ ಚಾಲಕ ನನಗೇ ಹಣ ಕೆಳುತ್ತಿಯಾ ಮಗನೇ ಎಂದೂ ಹಲ್ಲೆ ಮಾಡಲು ಯತ್ನಿಸಿದ್ದಾನೆ ಆಗ ಪಾನ್ ಶಾಪ್ ಅಂಗಡಿ ಮಾಲೀಕ ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಅಲ್ಲಿಯೇ ಇದ್ದ ಕತ್ತರಿಯಿಂದ ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದ ಘಟನೆ ಸ್ಮಾರ್ಟ್ ಸಿಟಿ ಹುಬ್ಬಳ್ಳಿಯ ಗೋಕುಲ್ ರೋಡ್ ಹರ್ಷ ಪಾನ್ ಶಾಪ್ ದಲ್ಲಿ ನಡೆದಿದೆ.
ನಿನ್ನೆ ಮದ್ಯಾಹ್ನದ ಸಮಯದಲ್ಲಿ ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಒಂದು ಬಾರ್ ಅಂಡ್ ರೆಸ್ಟೋರೆಂಟ್ ಗೆ ಬಂದ ಸ್ಥಳೀಯ ನಿವಾಸಿ ಆಟೋ ಚಾಲಕ ಸೋಮು ಎಂಬ ವ್ಯಕ್ತಿ ಕಂಠ ಪೂರ್ತಿ ಕುಡಿದು ( ಮದ್ಯಪಾನ ಮಾಡಿ ) ಮದ್ಯದ ನೀಶೆಯಲ್ಲಿ ಹರ್ಷ ಪಾನ್ ಶಾಪ್ ಗೆ ಬಂದಿದ್ದಾನೆ ಪಾನ್ ಶಾಪ್ ದಲ್ಲಿ ತನಗೆ ಬೇಕಾಗಿದ್ದನ್ನು ಕೇಳಿ ಪಡೆದಿದ್ದಾನೆ ಆಮೇಲೆ ಪಾನ್ ಶಾಪ್ ಅಂಗಡಿ ಮಾಲೀಕ ಸೋಮು ಗೆ ಬಿಲ್ ಕೊಡಿ ಎಂದು ಕೇಳಿದ್ದಾನೆ ಅದರಿಂದ ಕುಡಿದ ನಿಶೆಯಲ್ಲಿದ್ದ ಸೋಮು ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ ಪಾನ್ ಶಾಪ್ ಮಾಲೀಕ ವೃದ್ದನಾಗಿದ್ದು ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಎಲೆ (ಬೀಡಾ) ಕತ್ತರಿಸುವ ಕತ್ತರಿಯಿಂದ ಆಟೋ ಚಾಲಕನ (ಸೋಮು) ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದಿದ್ದಾನೆ ಈ ದುರ್ಘನೆಯಲ್ಲಿ ತೀವ್ರ ಗಂಭೀರವಾಗಿ ಗಾಯಗೊಂಡ ಸೋಮುನನ್ನು ಸ್ಥಳೀಯರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಇನ್ನೂ ಮಾಹಿತಿ ತಿಳಿದ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪಾನ್ ಶಾಪ್ ಅಂಗಡಿ ಮಾಲೀಕ ವೃದ್ಧನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago