ಮದ್ಯಪಾನ ಮಾಡಿ ನಿಶೆಯಲ್ಲಿ ಪಾನಶಾಪ್ ಅಂಗಡಿಗೆ ಹೋಗಿ ಬೇಕಾಗಿದ್ದನ್ನ ಪಡೆದು ಕೊಂಡಿದ್ದಾನೆ ನಂತರ ಪಾನ್ ಶಾಪ್ ಅಂಗಡಿ ಮಾಲೀಕ ಹಣ ಕೊಡಿ ಎಂದರೇ ಮದ್ಯಪಾನ ಮಾಡಿದ್ದ ಆಟೋ ಚಾಲಕ ನನಗೇ ಹಣ ಕೆಳುತ್ತಿಯಾ ಮಗನೇ ಎಂದೂ ಹಲ್ಲೆ ಮಾಡಲು ಯತ್ನಿಸಿದ್ದಾನೆ ಆಗ ಪಾನ್ ಶಾಪ್ ಅಂಗಡಿ ಮಾಲೀಕ ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಅಲ್ಲಿಯೇ ಇದ್ದ ಕತ್ತರಿಯಿಂದ ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದ ಘಟನೆ ಸ್ಮಾರ್ಟ್ ಸಿಟಿ ಹುಬ್ಬಳ್ಳಿಯ ಗೋಕುಲ್ ರೋಡ್ ಹರ್ಷ ಪಾನ್ ಶಾಪ್ ದಲ್ಲಿ ನಡೆದಿದೆ.
ನಿನ್ನೆ ಮದ್ಯಾಹ್ನದ ಸಮಯದಲ್ಲಿ ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಒಂದು ಬಾರ್ ಅಂಡ್ ರೆಸ್ಟೋರೆಂಟ್ ಗೆ ಬಂದ ಸ್ಥಳೀಯ ನಿವಾಸಿ ಆಟೋ ಚಾಲಕ ಸೋಮು ಎಂಬ ವ್ಯಕ್ತಿ ಕಂಠ ಪೂರ್ತಿ ಕುಡಿದು ( ಮದ್ಯಪಾನ ಮಾಡಿ ) ಮದ್ಯದ ನೀಶೆಯಲ್ಲಿ ಹರ್ಷ ಪಾನ್ ಶಾಪ್ ಗೆ ಬಂದಿದ್ದಾನೆ ಪಾನ್ ಶಾಪ್ ದಲ್ಲಿ ತನಗೆ ಬೇಕಾಗಿದ್ದನ್ನು ಕೇಳಿ ಪಡೆದಿದ್ದಾನೆ ಆಮೇಲೆ ಪಾನ್ ಶಾಪ್ ಅಂಗಡಿ ಮಾಲೀಕ ಸೋಮು ಗೆ ಬಿಲ್ ಕೊಡಿ ಎಂದು ಕೇಳಿದ್ದಾನೆ ಅದರಿಂದ ಕುಡಿದ ನಿಶೆಯಲ್ಲಿದ್ದ ಸೋಮು ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ ಪಾನ್ ಶಾಪ್ ಮಾಲೀಕ ವೃದ್ದನಾಗಿದ್ದು ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಎಲೆ (ಬೀಡಾ) ಕತ್ತರಿಸುವ ಕತ್ತರಿಯಿಂದ ಆಟೋ ಚಾಲಕನ (ಸೋಮು) ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದಿದ್ದಾನೆ ಈ ದುರ್ಘನೆಯಲ್ಲಿ ತೀವ್ರ ಗಂಭೀರವಾಗಿ ಗಾಯಗೊಂಡ ಸೋಮುನನ್ನು ಸ್ಥಳೀಯರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಇನ್ನೂ ಮಾಹಿತಿ ತಿಳಿದ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪಾನ್ ಶಾಪ್ ಅಂಗಡಿ ಮಾಲೀಕ ವೃದ್ಧನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…