ಬೆಂಗಳೂರು: ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿ, ಸುಮಾರು ₹13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ನೆಹರೂ ನಗರದ ನಿವಾಸಿ ರಿಚರ್ಡ್ (25) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದು, ನಂತರ ಖಾಸಗಿ ಕಂಪನಿಯೊಂದರಲ್ಲಿ ಮಾಸಿಕ ₹1 ಲಕ್ಷ ಸಂಬಳದ ಕೆಲಸವನ್ನೂ ಮಾಡುತ್ತಿದ್ದನು.
ಆದರೆ ದುಬಾರಿ ಬಟ್ಟೆ, ಬ್ರ್ಯಾಂಡೆಡ್ ಉತ್ಪನ್ನಗಳ ಮೇಲೆ ಆಸಕ್ತಿ ಬೆಳೆದಂತೆ, ಖರ್ಚು ನಿಭಾಯಿಸಲು ಆತ ಕಳ್ಳತನದ ಮಾರ್ಗವನ್ನು ಆಯ್ದುಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸುಲಭವಾಗಿ ಹಣ ಸಂಪಾದಿಸಿ ಐಷಾರಾಮಿ ಜೀವನ ನಡೆಸುವ ಆಕಾಂಕ್ಷೆಯಿಂದ ಕೆಲಸ ತೊರೆದು ಆರ್ಥಿಕ ಅಪರಾಧಗಳಿಗೆ ಮುಂದಾಗಿದ್ದ ಎನ್ನಲಾಗಿದೆ.
ಚಿನ್ನಾಭರಣ ಅಂಗಡಿಗಳಲ್ಲಿ ಗ್ರಾಹಕರಂತೆ ವರ್ತನೆ ಮಾಡಿ, ಭದ್ರತಾ ಸಿಬ್ಬಂದಿ ಇಲ್ಲದ ಮಳಿಗೆಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಮಾರಾಟಗಾರರ ಗಮನ ಬೇರೆಡೆ ಸೆಳೆದು, ದರಕೋರಿಸಿಕೊಳ್ಳುವ ನೆಪದಲ್ಲಿ ಆಭರಣಗಳನ್ನು ವೀಕ್ಷಿಸುತ್ತಿದ್ದ. ಈ ವೇಳೆ ಸಿಡುಕು ಸದುಪಯೋಗಪಡಿಸಿಕೊಂಡು ಚಿನ್ನಾಭರಣಗಳನ್ನು ಕದಿಯುತ್ತಿದ್ದ.
ಬೆಂಗಳೂರು ನಗರ ಹಾಗೂ ಕೇರಳದ ಕೋಟಯಂ ಸೇರಿದಂತೆ ಇತರೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಒಟ್ಟು 9 ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದ್ದು, ಆರೋಪಿಯಿಂದ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…