Latest

ಐಷಾರಾಮಿ ಜೀವನಕ್ಕಾಗಿ ಚಿನ್ನಾಭರಣ ಕಳ್ಳತನ: ಬಿ.ಟೆಕ್ ಪದವೀಧರ ಪೊಲೀಸ್ ಬಲೆಗೆ

ಬೆಂಗಳೂರು: ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿ, ಸುಮಾರು ₹13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ನೆಹರೂ ನಗರದ ನಿವಾಸಿ ರಿಚರ್ಡ್ (25) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದು, ನಂತರ ಖಾಸಗಿ ಕಂಪನಿಯೊಂದರಲ್ಲಿ ಮಾಸಿಕ ₹1 ಲಕ್ಷ ಸಂಬಳದ ಕೆಲಸವನ್ನೂ ಮಾಡುತ್ತಿದ್ದನು.

ಆದರೆ ದುಬಾರಿ ಬಟ್ಟೆ, ಬ್ರ್ಯಾಂಡೆಡ್ ಉತ್ಪನ್ನಗಳ ಮೇಲೆ ಆಸಕ್ತಿ ಬೆಳೆದಂತೆ, ಖರ್ಚು ನಿಭಾಯಿಸಲು ಆತ ಕಳ್ಳತನದ ಮಾರ್ಗವನ್ನು ಆಯ್ದುಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸುಲಭವಾಗಿ ಹಣ ಸಂಪಾದಿಸಿ ಐಷಾರಾಮಿ ಜೀವನ ನಡೆಸುವ ಆಕಾಂಕ್ಷೆಯಿಂದ ಕೆಲಸ ತೊರೆದು ಆರ್ಥಿಕ ಅಪರಾಧಗಳಿಗೆ ಮುಂದಾಗಿದ್ದ ಎನ್ನಲಾಗಿದೆ.

ಚಿನ್ನಾಭರಣ ಅಂಗಡಿಗಳಲ್ಲಿ ಗ್ರಾಹಕರಂತೆ ವರ್ತನೆ ಮಾಡಿ, ಭದ್ರತಾ ಸಿಬ್ಬಂದಿ ಇಲ್ಲದ ಮಳಿಗೆಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಮಾರಾಟಗಾರರ ಗಮನ ಬೇರೆಡೆ ಸೆಳೆದು, ದರಕೋರಿಸಿಕೊಳ್ಳುವ ನೆಪದಲ್ಲಿ ಆಭರಣಗಳನ್ನು ವೀಕ್ಷಿಸುತ್ತಿದ್ದ. ಈ ವೇಳೆ ಸಿಡುಕು ಸದುಪಯೋಗಪಡಿಸಿಕೊಂಡು ಚಿನ್ನಾಭರಣಗಳನ್ನು ಕದಿಯುತ್ತಿದ್ದ.

ಬೆಂಗಳೂರು ನಗರ ಹಾಗೂ ಕೇರಳದ ಕೋಟಯಂ ಸೇರಿದಂತೆ ಇತರೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಒಟ್ಟು 9 ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದ್ದು, ಆರೋಪಿಯಿಂದ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

nazeer ahamad

Recent Posts

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

9 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

9 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

9 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

9 hours ago

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…

9 hours ago

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

9 hours ago