ಕುಂದಾಪುರ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅವರ ಮೇಲೆ ಇಲಾಖಾ ವಿಚಾರಣೆ ಮುಂದುವರಿಯಲಿದೆ.
ಉಡುಪಿ ಜಿಲ್ಲಾಧಿಕಾರಿಗಳು ಮಹೇಶ್ ಚಂದ್ರ ವಿರುದ್ಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರಿಗೆ ನೀಡಲಾಗಿದೆ.
ಮಹೇಶ್ ಚಂದ್ರ ಅವರು ಈ ಹುದ್ದೆಗೆ ಬಂದ ಮೇಲೆ ಹಲವಾರು ವಿವಾದಗಳಿಗೆ ಕಾರಣವಾಗಿದ್ದರು. ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ವಲಯದಲ್ಲಿ ಅವರ ನೇಮಕಾತಿಯ ಕುರಿತು ಅಸಮಾಧಾನ ವ್ಯಕ್ತವಾಗಿತ್ತು. ಹಿಂದಿನ ಶಾಸಕರೊಬ್ಬರ ಪ್ರಭಾವದಿಂದಲೇ ಈ ಹುದ್ದೆಗೆ ಅವರು ಬಂದಿದ್ದಾರೆ ಎಂಬ ಮಾತುಗಳು ಪ್ರಸಾರವಾಗಿದ್ದವು.
ಇತ್ತೀಚಿನ ವರ್ಷಗಳಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಈ ಹುದ್ದೆಯಲ್ಲಿದ್ದ ರಶ್ಮಿ ಅವರ ಆಕಸ್ಮಿಕ ವರ್ಗಾವಣೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಈಗ ಮಹೇಶ್ ಚಂದ್ರ ಅಮಾನತು ಆದ ಹಿನ್ನೆಲೆಯಲ್ಲಿ ಈ ಹುದ್ದೆ ಮತ್ತೆ ಸುದ್ದಿಯಲ್ಲಿದೆ.
ಮಹೇಶ್ ಚಂದ್ರ ಅವರು ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅಮಾನತು ಆದದ್ದು ಗಮನಾರ್ಹವಾಗಿದೆ. ಅವರ ಮೇಲೆ ನಡೆದಿರುವ ಈ ಕ್ರಮದಿಂದಾಗಿ ಕಚೇರಿ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸರ್ಕಾರ ಈ ಹಂತದಲ್ಲಿ ಮುಂದಿನ ತನಿಖಾ ಪ್ರಕ್ರಿಯೆ ಎತ್ತಹಾಗಿರುತ್ತದೆ ಎಂಬುದನ್ನು ಗಮನಿಸುವ ಅಗತ್ಯವಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…