ಕುಂದಾಪುರ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅವರ ಮೇಲೆ ಇಲಾಖಾ ವಿಚಾರಣೆ ಮುಂದುವರಿಯಲಿದೆ.
ಉಡುಪಿ ಜಿಲ್ಲಾಧಿಕಾರಿಗಳು ಮಹೇಶ್ ಚಂದ್ರ ವಿರುದ್ಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರಿಗೆ ನೀಡಲಾಗಿದೆ.
ಮಹೇಶ್ ಚಂದ್ರ ಅವರು ಈ ಹುದ್ದೆಗೆ ಬಂದ ಮೇಲೆ ಹಲವಾರು ವಿವಾದಗಳಿಗೆ ಕಾರಣವಾಗಿದ್ದರು. ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ವಲಯದಲ್ಲಿ ಅವರ ನೇಮಕಾತಿಯ ಕುರಿತು ಅಸಮಾಧಾನ ವ್ಯಕ್ತವಾಗಿತ್ತು. ಹಿಂದಿನ ಶಾಸಕರೊಬ್ಬರ ಪ್ರಭಾವದಿಂದಲೇ ಈ ಹುದ್ದೆಗೆ ಅವರು ಬಂದಿದ್ದಾರೆ ಎಂಬ ಮಾತುಗಳು ಪ್ರಸಾರವಾಗಿದ್ದವು.
ಇತ್ತೀಚಿನ ವರ್ಷಗಳಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಈ ಹುದ್ದೆಯಲ್ಲಿದ್ದ ರಶ್ಮಿ ಅವರ ಆಕಸ್ಮಿಕ ವರ್ಗಾವಣೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಈಗ ಮಹೇಶ್ ಚಂದ್ರ ಅಮಾನತು ಆದ ಹಿನ್ನೆಲೆಯಲ್ಲಿ ಈ ಹುದ್ದೆ ಮತ್ತೆ ಸುದ್ದಿಯಲ್ಲಿದೆ.
ಮಹೇಶ್ ಚಂದ್ರ ಅವರು ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅಮಾನತು ಆದದ್ದು ಗಮನಾರ್ಹವಾಗಿದೆ. ಅವರ ಮೇಲೆ ನಡೆದಿರುವ ಈ ಕ್ರಮದಿಂದಾಗಿ ಕಚೇರಿ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸರ್ಕಾರ ಈ ಹಂತದಲ್ಲಿ ಮುಂದಿನ ತನಿಖಾ ಪ್ರಕ್ರಿಯೆ ಎತ್ತಹಾಗಿರುತ್ತದೆ ಎಂಬುದನ್ನು ಗಮನಿಸುವ ಅಗತ್ಯವಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…