ಕುಂದಾಪುರ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅವರ ಮೇಲೆ ಇಲಾಖಾ ವಿಚಾರಣೆ ಮುಂದುವರಿಯಲಿದೆ.
ಉಡುಪಿ ಜಿಲ್ಲಾಧಿಕಾರಿಗಳು ಮಹೇಶ್ ಚಂದ್ರ ವಿರುದ್ಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರಿಗೆ ನೀಡಲಾಗಿದೆ.
ಮಹೇಶ್ ಚಂದ್ರ ಅವರು ಈ ಹುದ್ದೆಗೆ ಬಂದ ಮೇಲೆ ಹಲವಾರು ವಿವಾದಗಳಿಗೆ ಕಾರಣವಾಗಿದ್ದರು. ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ವಲಯದಲ್ಲಿ ಅವರ ನೇಮಕಾತಿಯ ಕುರಿತು ಅಸಮಾಧಾನ ವ್ಯಕ್ತವಾಗಿತ್ತು. ಹಿಂದಿನ ಶಾಸಕರೊಬ್ಬರ ಪ್ರಭಾವದಿಂದಲೇ ಈ ಹುದ್ದೆಗೆ ಅವರು ಬಂದಿದ್ದಾರೆ ಎಂಬ ಮಾತುಗಳು ಪ್ರಸಾರವಾಗಿದ್ದವು.
ಇತ್ತೀಚಿನ ವರ್ಷಗಳಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಈ ಹುದ್ದೆಯಲ್ಲಿದ್ದ ರಶ್ಮಿ ಅವರ ಆಕಸ್ಮಿಕ ವರ್ಗಾವಣೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಈಗ ಮಹೇಶ್ ಚಂದ್ರ ಅಮಾನತು ಆದ ಹಿನ್ನೆಲೆಯಲ್ಲಿ ಈ ಹುದ್ದೆ ಮತ್ತೆ ಸುದ್ದಿಯಲ್ಲಿದೆ.
ಮಹೇಶ್ ಚಂದ್ರ ಅವರು ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅಮಾನತು ಆದದ್ದು ಗಮನಾರ್ಹವಾಗಿದೆ. ಅವರ ಮೇಲೆ ನಡೆದಿರುವ ಈ ಕ್ರಮದಿಂದಾಗಿ ಕಚೇರಿ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸರ್ಕಾರ ಈ ಹಂತದಲ್ಲಿ ಮುಂದಿನ ತನಿಖಾ ಪ್ರಕ್ರಿಯೆ ಎತ್ತಹಾಗಿರುತ್ತದೆ ಎಂಬುದನ್ನು ಗಮನಿಸುವ ಅಗತ್ಯವಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…