Latest

ಭ್ರಷ್ಟಾಚಾರ ಆರೋಪದ ಹಿನ್ನೆಲೆ: ಕುಂದಾಪುರ ಎ.ಸಿ ಮಹೇಶ್ ಚಂದ್ರ ಅಮಾನತು

ಕುಂದಾಪುರ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅವರ ಮೇಲೆ ಇಲಾಖಾ ವಿಚಾರಣೆ ಮುಂದುವರಿಯಲಿದೆ.

ಉಡುಪಿ ಜಿಲ್ಲಾಧಿಕಾರಿಗಳು ಮಹೇಶ್ ಚಂದ್ರ ವಿರುದ್ಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರಿಗೆ ನೀಡಲಾಗಿದೆ.

ಮಹೇಶ್ ಚಂದ್ರ ಅವರು ಈ ಹುದ್ದೆಗೆ ಬಂದ ಮೇಲೆ ಹಲವಾರು ವಿವಾದಗಳಿಗೆ ಕಾರಣವಾಗಿದ್ದರು. ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ವಲಯದಲ್ಲಿ ಅವರ ನೇಮಕಾತಿಯ ಕುರಿತು ಅಸಮಾಧಾನ ವ್ಯಕ್ತವಾಗಿತ್ತು. ಹಿಂದಿನ ಶಾಸಕರೊಬ್ಬರ ಪ್ರಭಾವದಿಂದಲೇ ಈ ಹುದ್ದೆಗೆ ಅವರು ಬಂದಿದ್ದಾರೆ ಎಂಬ ಮಾತುಗಳು ಪ್ರಸಾರವಾಗಿದ್ದವು.

ಇತ್ತೀಚಿನ ವರ್ಷಗಳಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಈ ಹುದ್ದೆಯಲ್ಲಿದ್ದ ರಶ್ಮಿ ಅವರ ಆಕಸ್ಮಿಕ ವರ್ಗಾವಣೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಈಗ ಮಹೇಶ್ ಚಂದ್ರ ಅಮಾನತು ಆದ ಹಿನ್ನೆಲೆಯಲ್ಲಿ ಈ ಹುದ್ದೆ ಮತ್ತೆ ಸುದ್ದಿಯಲ್ಲಿದೆ.

ಮಹೇಶ್ ಚಂದ್ರ ಅವರು ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅಮಾನತು ಆದದ್ದು ಗಮನಾರ್ಹವಾಗಿದೆ. ಅವರ ಮೇಲೆ ನಡೆದಿರುವ ಈ ಕ್ರಮದಿಂದಾಗಿ ಕಚೇರಿ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸರ್ಕಾರ ಈ ಹಂತದಲ್ಲಿ ಮುಂದಿನ ತನಿಖಾ ಪ್ರಕ್ರಿಯೆ ಎತ್ತಹಾಗಿರುತ್ತದೆ ಎಂಬುದನ್ನು ಗಮನಿಸುವ ಅಗತ್ಯವಿದೆ.

 

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago