ಬಾಗಲಕೋಟೆ: ಕರ್ತವ್ಯಲೋಪ ಮತ್ತು ಅವ್ಯವಹಾರದ ಆರೋಪ ಎದುರಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಮೆಹಬೂಬ ತುಂಬರಮಟ್ಟಿ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
₹26 ಲಕ್ಷ ದುರುಪಯೋಗ, ಟೆಂಡರ್ದಾರರ ಬಾಕಿ ಹಣ
ಇಲಾಖೆಯ ವಸತಿ ನಿಲಯಗಳಲ್ಲಿ ಊಟ ಮತ್ತು ಮೂಲಸೌಕರ್ಯ ಒದಗಿಸುವ ಸಂಬಂಧ ಸುಮಾರು ₹26 ಲಕ್ಷ ಹಣ ದುರುಪಯೋಗಗೊಂಡಿರುವುದು ಹಾಗೂ ಆಹಾರ ಸರಬರಾಜುದಾರರಿಗೆ ಹಣ ಪಾವತಿ ಮಾಡಲಾಗದೆ ಉಳಿದಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.
ಅಧಿಕಾರಿಗಳ ತನಿಖಾ ವರದಿ
ಈ ಕುರಿತು ಅಧಿಕಾರಿಗಳ ತಂಡ ತನಿಖೆ ನಡೆಸಿದ್ದು, ದಾಖಲೆಗಳಲ್ಲಿ ಅಕ್ರಮಗಳು ಕಂಡು ಬಂದಿದ್ದು, ನಿಗದಿತ ನಿಯಮಗಳು ಪಾಲನೆಯಾಗಿಲ್ಲ ಎಂಬುದು ವರದಿಯ ಮುಖ್ಯನಿಷ್ಕರ್ಷೆ. ಈ ವರದಿ ಆಧಾರದ ಮೇಲೆ ಮೇಹಬೂಬ ತುಂಬರಮಟ್ಟಿಯನ್ನು ಅಮಾನತು ಮಾಡಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿಯಲಿದೆ ಎಂದು ಅಧೀನ ಕಾರ್ಯದರ್ಶಿ ಉಮಾದೇವಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…