ಬಾಗಲಕೋಟೆ: ಕರ್ತವ್ಯಲೋಪ ಮತ್ತು ಅವ್ಯವಹಾರದ ಆರೋಪ ಎದುರಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಮೆಹಬೂಬ ತುಂಬರಮಟ್ಟಿ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
₹26 ಲಕ್ಷ ದುರುಪಯೋಗ, ಟೆಂಡರ್ದಾರರ ಬಾಕಿ ಹಣ
ಇಲಾಖೆಯ ವಸತಿ ನಿಲಯಗಳಲ್ಲಿ ಊಟ ಮತ್ತು ಮೂಲಸೌಕರ್ಯ ಒದಗಿಸುವ ಸಂಬಂಧ ಸುಮಾರು ₹26 ಲಕ್ಷ ಹಣ ದುರುಪಯೋಗಗೊಂಡಿರುವುದು ಹಾಗೂ ಆಹಾರ ಸರಬರಾಜುದಾರರಿಗೆ ಹಣ ಪಾವತಿ ಮಾಡಲಾಗದೆ ಉಳಿದಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.
ಅಧಿಕಾರಿಗಳ ತನಿಖಾ ವರದಿ
ಈ ಕುರಿತು ಅಧಿಕಾರಿಗಳ ತಂಡ ತನಿಖೆ ನಡೆಸಿದ್ದು, ದಾಖಲೆಗಳಲ್ಲಿ ಅಕ್ರಮಗಳು ಕಂಡು ಬಂದಿದ್ದು, ನಿಗದಿತ ನಿಯಮಗಳು ಪಾಲನೆಯಾಗಿಲ್ಲ ಎಂಬುದು ವರದಿಯ ಮುಖ್ಯನಿಷ್ಕರ್ಷೆ. ಈ ವರದಿ ಆಧಾರದ ಮೇಲೆ ಮೇಹಬೂಬ ತುಂಬರಮಟ್ಟಿಯನ್ನು ಅಮಾನತು ಮಾಡಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿಯಲಿದೆ ಎಂದು ಅಧೀನ ಕಾರ್ಯದರ್ಶಿ ಉಮಾದೇವಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…