Latest

ಬ್ಯಾಡ್ಮಿಂಟನ್ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ.

ಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಪ್ರಸಿದ್ಧಿಯಾದ ಬೆಂಗಳೂರಿನಲ್ಲಿ ಮತ್ತೊಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಬ್ಯಾಡ್ಮಿಂಟನ್ ತರಬೇತುದಾರರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.

ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬ ವ್ಯಕ್ತಿ, ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದನು. ಈ ವೇಳೆಯಲ್ಲಿ ತರಬೇತಿಯ ಹೆಸರಿನಲ್ಲಿ ಹಲವು ಬಾಲಕಿಯರ ಬಳಿ ನಿಕಟವಾಗಿ ಸಂಪರ್ಕ ಬೆಳೆಸಿದ್ದನು. ಈ ಪೈಕಿ ಒಬ್ಬ ಅಪ್ರಾಪ್ತೆ ಬಾಲಕಿಯನ್ನು ನಂಬಿಸಿ, ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಬಾಲಕಿ ಒಂದು ವೇಳೆ ರಜೆಗಾಗಿ ತನ್ನ ಅಜ್ಜಿಯ ಮನೆಗೆ ಹೋದಾಗ, ತನ್ನ ಮೊಬೈಲ್‌ನಲ್ಲಿ ಸುರೇಶ್‌ಗೆ ಕಳುಹಿಸಿರುವ ನಗ್ನ ಚಿತ್ರವೊಂದನ್ನು ಅಜ್ಜಿ ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಈ ವಿಷಯವನ್ನು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಬಳಿಕ ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಕೋಚ್ ಸುರೇಶ್‌ನ ಕೃತ್ಯಗಳು ಬಯಲಾಗಿ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ, ಆತನ ಮೊಬೈಲ್‌ನಲ್ಲಿ 13ರಿಂದ 16 ವರ್ಷದೊಳಗಿನ ಹಲವು ಬಾಲಕಿಯರ ನಗ್ನ ಚಿತ್ರಗಳು ಮತ್ತು ವಿಡಿಯೋಗಳು ಪತ್ತೆಯಾಗಿವೆ. ಈ ಮೂಲಕ ಮತ್ತಷ್ಟು ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಪೊಲೀಸರು ಸುರೇಶ್ ಬಾಲಾಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, 8 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ತನಿಖೆಯ ಭಾಗವಾಗಿ, ಅಪ್ರಾಪ್ತೆಯರ ಹೇಳಿಕೆ ದಾಖಲಿಸಲಾಗುತ್ತಿದೆ. ಇನ್ನುಳಿದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದರೆ, ಅದರೂ ಕೂಡ ಬಯಲಾಗುವ ನಿರೀಕ್ಷೆಯಿದೆ.

ಈ ಘಟನೆ ಬೆಂಗಳೂರಿನ ಕ್ರೀಡಾ ಕ್ಷೇತ್ರದಲ್ಲಿ ಭಾರಿ  ಉಂಟುಮಾಡಿದ್ದು, ಪೋಷಕರು ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರವಾಗಿ ಯೋಚಿಸುವ ಅಗತ್ಯವಿದೆ ಎಂಬ ಚರ್ಚೆ ನಡೆಯುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

6 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

6 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

6 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

6 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago