ಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಪ್ರಸಿದ್ಧಿಯಾದ ಬೆಂಗಳೂರಿನಲ್ಲಿ ಮತ್ತೊಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಬ್ಯಾಡ್ಮಿಂಟನ್ ತರಬೇತುದಾರರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.
ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬ ವ್ಯಕ್ತಿ, ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದನು. ಈ ವೇಳೆಯಲ್ಲಿ ತರಬೇತಿಯ ಹೆಸರಿನಲ್ಲಿ ಹಲವು ಬಾಲಕಿಯರ ಬಳಿ ನಿಕಟವಾಗಿ ಸಂಪರ್ಕ ಬೆಳೆಸಿದ್ದನು. ಈ ಪೈಕಿ ಒಬ್ಬ ಅಪ್ರಾಪ್ತೆ ಬಾಲಕಿಯನ್ನು ನಂಬಿಸಿ, ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.
ಬಾಲಕಿ ಒಂದು ವೇಳೆ ರಜೆಗಾಗಿ ತನ್ನ ಅಜ್ಜಿಯ ಮನೆಗೆ ಹೋದಾಗ, ತನ್ನ ಮೊಬೈಲ್ನಲ್ಲಿ ಸುರೇಶ್ಗೆ ಕಳುಹಿಸಿರುವ ನಗ್ನ ಚಿತ್ರವೊಂದನ್ನು ಅಜ್ಜಿ ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಈ ವಿಷಯವನ್ನು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಬಳಿಕ ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಕೋಚ್ ಸುರೇಶ್ನ ಕೃತ್ಯಗಳು ಬಯಲಾಗಿ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ, ಆತನ ಮೊಬೈಲ್ನಲ್ಲಿ 13ರಿಂದ 16 ವರ್ಷದೊಳಗಿನ ಹಲವು ಬಾಲಕಿಯರ ನಗ್ನ ಚಿತ್ರಗಳು ಮತ್ತು ವಿಡಿಯೋಗಳು ಪತ್ತೆಯಾಗಿವೆ. ಈ ಮೂಲಕ ಮತ್ತಷ್ಟು ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಪೊಲೀಸರು ಸುರೇಶ್ ಬಾಲಾಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, 8 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ತನಿಖೆಯ ಭಾಗವಾಗಿ, ಅಪ್ರಾಪ್ತೆಯರ ಹೇಳಿಕೆ ದಾಖಲಿಸಲಾಗುತ್ತಿದೆ. ಇನ್ನುಳಿದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದರೆ, ಅದರೂ ಕೂಡ ಬಯಲಾಗುವ ನಿರೀಕ್ಷೆಯಿದೆ.
ಈ ಘಟನೆ ಬೆಂಗಳೂರಿನ ಕ್ರೀಡಾ ಕ್ಷೇತ್ರದಲ್ಲಿ ಭಾರಿ ಉಂಟುಮಾಡಿದ್ದು, ಪೋಷಕರು ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರವಾಗಿ ಯೋಚಿಸುವ ಅಗತ್ಯವಿದೆ ಎಂಬ ಚರ್ಚೆ ನಡೆಯುತ್ತಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…