Latest

ಬ್ಯಾಗ್ ಮತ್ತು ಮನೆ ಕಳ್ಳತನ: ಅಂತರ್ ರಾಜ್ಯದ ಇಬ್ಬರು ಆರೋಪಿಗಳು ಸೆರೆ

ಧಾರವಾಡ: ಧಾರವಾಡ ಬಸ್ ನಿಲ್ದಾಣ ಹಾಗೂ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೂಲದವರಾಗಿದ್ದಾರೆ.

ಧಾರವಾಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನು ಕದಿಯುತ್ತಿದ್ದ ತಮಿಳುನಾಡಿನ ತಿರುಚನಪಳ್ಳಿ ಮೂಲದ 37 ವರ್ಷದ ಮಹಿಳೆ ಗುನಾ ಮೀನಾಚಿ ಸಕ್ತಿ ಮತ್ತು ಮನೆ ಕಳ್ಳತನಗಳಲ್ಲಿ ತೊಡಗಿದ್ದ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ 46 ವರ್ಷದ ಕಾಮೇಪಲ್ಲಿ ಶ್ರೀನಿವಾಸ್ ಎಂಬವರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ಇಬ್ಬರು ಆರೋಪಿಗಳು ಧಾರವಾಡ ಉಪನಗರ ಪೊಲೀಸ್ ಠಾಣೆಯ ಎರಡು ಕಳ್ಳತನ ಪ್ರಕರಣಗಳು ಹಾಗೂ ಹುಬ್ಬಳ್ಳಿಯ ಗೋಕುಲ್ ರಸ್ತೆ ಪೊಲೀಸ್ ಠಾಣೆಯ ಒಂದು ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ತನಿಖೆಯಿಂದ ಹೊರಬಂದಿದೆ.

ಬಂಧಿತರಿಂದ 100 ಗ್ರಾಂ ಬಂಗಾರದ ಆಭರಣಗಳು ಮತ್ತು 750 ಗ್ರಾಂ ಬೆಳ್ಳಿಯ ಆಭರಣಗಳು ಸೇರಿದಂತೆ 9.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಸ್ತುತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಇವರ ವಿರುದ್ಧ ಹೆಚ್ಚಿನ ತನಿಖೆ ಮುಂದುವರಿದಿದೆ. ಇತರ ಕಳ್ಳತನ ಪ್ರಕರಣಗಳ ಜಾಲವನ್ನು ಬಯಲಿಗೆ ಎಳೆಯುವ ದೃಷ್ಟಿಯಿಂದ ವಿಚಾರಣೆ ನಡೆಯುತ್ತಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago