Latest

ಸರಕಾರಿ ಶಾಲೆಯ ಹಾಲಿನ ಪುಡಿ ಕಳ್ಳರ ಹೆಡೆಮುರಿ ಕಟ್ಟಿದ ಬಾಗಲಕೋಟೆ ಪೊಲೀಸ್

ಬಾಗಲಕೋಟೆ:ಇತ್ತೀಚೆಗೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಕಾರಿ ಶಾಲೆಯ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಲ್ಲಿ ಉಚಿತವಾಗಿ ವಿತರಣೆ ಆಗುವ ಹಾಲಿನ ಪುಡಿ ಪಾಕೆಟ್ ಗಳನ್ನು ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಕಲಾದಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 1 ಪ್ರಕರಣ ಹೀಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು. ಸದರ ಪ್ರಕರಣಗಳಲ್ಲಿ ಒಟ್ಟು 697 ಕೆಜಿ ಹಾಲಿನ ಪುಡಿ ಹಾಗೂ 50 ಕೆಜಿ ಒಳ್ಳೆನ್ನೆ 2.09.861 ರೂ ಗಳು ಕಳ್ಳತನ ವಾಗಿರುತ್ತದೆ.

ಆದ ಕಾರಣ ಕಳುವಾದ ಮಾಲು ಹಾಗೂ ಆರೋಪಿತರ ಪತ್ತೆ ಮಾಡಲು ಶ್ರೀ ಜಯಪ್ರಕಾಶ ಮಾನ್ಯ ಪೊಲೀಸ್ ಅಧೀಕ್ಷಕರು ಬಾಗಲಕೋಟೆ ಜಿಲ್ಲೆ.ಹಾಗೂ ಪ್ರಸನ್ನ ದೇಸಾಯಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬಾಗಲಕೋಟೆ ಮತ್ತು ಪೊಲೀಸ್ ಉಪ ವಿಭಾಗಾಧಿಕಾರಿ ಗಳಾದ ಶ್ರೀ ಪ್ರಶಾಂತ ಮುನ್ನೊಳ್ಳಿ ಹಾಗೂ ಬೀ ಎಂ ಸೋರಿ ಸಿಪಿಐ ಬಾಗಲಕೋಟೆ ಗ್ರಾಮೀಣ ವೃತ್ತ ಅವರ ಮಾರ್ಗದರ್ಶನದಲ್ಲಿ ಶ್ರೀ ಜನಾರ್ಧನ ಭಟ್ರಳ್ಳಿ ಪಿಎಸ್ಐ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ರವರ ನೈತೃತ್ವದಲ್ಲಿ ತನಿಖಾ ಅಪರಾಧ ತಂಡವನ್ನು ರಚಿಸಲಾಗಿತ್ತು.

ಸದರಿ ಅಪರಾಧ ಪತ್ತೆ ತಂಡದ ಅಧಿಕಾರಿ ಹಾಗೂ ಸಿಬ್ಬಂದಿ ಜನರು ಕೂಡಿಕೊಂಡು ಇದರ ಆರೋಪಿತರ ತಪಾಸಣೆಯಲ್ಲಿ ಇದ್ದಾಗ ದಿನಾಂಕ 05/02/2023 ರಂದು 03 ಘಂಟೆಗೆ ಗದ್ದನಕೆರಿ ಗ್ರಾಮದಲ್ಲಿ ಟಮ್ ಟಮ್ ವಾಹನದಲ್ಲಿ ಸಂಶಯಾಸ್ಪದ ವಾಗಿ ತಿರುಗಾಡುತ್ತಿದ್ದ ಆರೋಪಿತರು ಆದ 1) ಕಲ್ಮೇಶ್ ತಂದೆ ಈರಪ್ಪ ಗುಳನ್ನವರ 2)ಸುರೇಶ ಈರಪ್ಪ ಅಗಸರ 3)ಶಿವಾನಂದ ಸಿದ್ದಪ್ಪ ಡೊಳ್ಳಿನವರ ಎಲ್ಲರೂ ಸಾ //ಗಿರಿಸಾಗರ ತಾಲ್ಲೂಕು ಬೀಳಗಿ ಇವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಸದರಿ ಆಸಾಮಿಗಳು ಈಗ ಕಳೆದ ಎರಡು ವರ್ಷಗಳಿಂದ ಬಾಗಲಕೋಟೆ ಗ್ರಾಮೀಣ ಹಾಗೂ ಶಹರ ಮತ್ತು ಕಲಾದಗಿ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಯಲ್ಲಿ ಉಚಿತವಾಗಿ ಶಾಲಾ ಮಕ್ಕಳಿಗೆ ವಿತರಣೆ ಆಗುವ ಹಾಲಿನ ಪುಡಿ ಮತ್ತು ಒಳ್ಳೆನ್ನೇ ಪಾಕಿಟ್ ಗಳನ್ನೂ ಕಳ್ಳತನ ಮಾಡಿ ,ಕಳ್ಳತನ ಮಾಡಿದ್ದ ಹಾಲಿನ ಪುಡಿಯಿಂದ ಕವಾ ತಯಾರಿಸಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡು ತಮ್ಮ ಸ್ವ ಇಚ್ಛೆ ಹೇಳಿಕೆ ನೀಡಿದ್ದು ,ತನಿಖೆ ಕೈಗೊಂಡು ಆರೋಪಿತರಿಂದ 97 ಕೆಜಿ ಹಾಲಿನ ಪುಡಿಯಿಂದ ಕವಾ ತಯಾರಿಸಿ ಮಾರಾಟ ಮಾಡಿ ಬಂದ ಹಣ ಒಟ್ಟು 1,22.000 ರೂಪಾಯಿಗಳನ್ನು ಮತ್ತು ಕಳ್ಳತನಕ್ಕೆ ಉಪಯೋಗಿಸಿದ ಒಂದು ಟಂ ಟಂ ಗೂಡ್ಸ್ ವಾಹನವನ್ನು ಜಪ್ತಿ ಮಾಡಿಕೊಂಡು ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಇರುತ್ತದೆ.

ಈ ಕಾರ್ಯದಲ್ಲಿ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ಯ ಪಿಸೈ ರವರಾದ ಶ್ರೀ ಜನಾರ್ಧನ ಬಿ.ಮತ್ತು ಎಸೈ ಡಿ.ಸಿ.ಗುಡ್ಡಳ್ಳಿ ಮತ್ತು ಸಿಬ್ಬಂದಿ ಜನರಾದ ಆರ್. ಬಿ.ಪದರಾ ,ಎಸ್ ಬಿ ಹಣಮಗೌಡ್ರ.ರಾಜಭಕ್ಷ ನಧಾಪ.ಪ್ರದೀಪ ಪಾಟೀಲ್.ಶ್ರೀಕಾಂತ ಸೊನ್ನದ .ಎನ್ ಎಂ ಗುರಾಣಿ .ವಾಹನ ಚಾಲಕರಾದ ರಾಮಸ್ವಾಮಿ ನಾಯಕ ಹಾಗೂ ಕಲಾದಗಿ ಪೊಲೀಸ್ ಠಾಣೆಯ ಚಿದಾನಂದ ಭಜಂತ್ರಿ ಇವರು ಭಾಗವಹಿಸಿದ್ದರು.ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜನರ ಕಾರ್ಯವೈಖರಿಯನ್ನು ಮಾನ್ಯ ಎಸ್ಪಿ ಸಾಹೇಬರು ಬಾಗಲಕೋಟೆ ಜಿಲ್ಲೆ ರವರು ಶ್ಲಾಘಿಸಿದ್ದಾರೆ.

ವರದಿ :ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

12 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

13 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 days ago