Latest

ಸರಕಾರಿ ಶಾಲೆಯ ಹಾಲಿನ ಪುಡಿ ಕಳ್ಳರ ಹೆಡೆಮುರಿ ಕಟ್ಟಿದ ಬಾಗಲಕೋಟೆ ಪೊಲೀಸ್

ಬಾಗಲಕೋಟೆ:ಇತ್ತೀಚೆಗೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಕಾರಿ ಶಾಲೆಯ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಲ್ಲಿ ಉಚಿತವಾಗಿ ವಿತರಣೆ ಆಗುವ ಹಾಲಿನ ಪುಡಿ ಪಾಕೆಟ್ ಗಳನ್ನು ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಕಲಾದಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 1 ಪ್ರಕರಣ ಹೀಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು. ಸದರ ಪ್ರಕರಣಗಳಲ್ಲಿ ಒಟ್ಟು 697 ಕೆಜಿ ಹಾಲಿನ ಪುಡಿ ಹಾಗೂ 50 ಕೆಜಿ ಒಳ್ಳೆನ್ನೆ 2.09.861 ರೂ ಗಳು ಕಳ್ಳತನ ವಾಗಿರುತ್ತದೆ.

ಆದ ಕಾರಣ ಕಳುವಾದ ಮಾಲು ಹಾಗೂ ಆರೋಪಿತರ ಪತ್ತೆ ಮಾಡಲು ಶ್ರೀ ಜಯಪ್ರಕಾಶ ಮಾನ್ಯ ಪೊಲೀಸ್ ಅಧೀಕ್ಷಕರು ಬಾಗಲಕೋಟೆ ಜಿಲ್ಲೆ.ಹಾಗೂ ಪ್ರಸನ್ನ ದೇಸಾಯಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬಾಗಲಕೋಟೆ ಮತ್ತು ಪೊಲೀಸ್ ಉಪ ವಿಭಾಗಾಧಿಕಾರಿ ಗಳಾದ ಶ್ರೀ ಪ್ರಶಾಂತ ಮುನ್ನೊಳ್ಳಿ ಹಾಗೂ ಬೀ ಎಂ ಸೋರಿ ಸಿಪಿಐ ಬಾಗಲಕೋಟೆ ಗ್ರಾಮೀಣ ವೃತ್ತ ಅವರ ಮಾರ್ಗದರ್ಶನದಲ್ಲಿ ಶ್ರೀ ಜನಾರ್ಧನ ಭಟ್ರಳ್ಳಿ ಪಿಎಸ್ಐ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ರವರ ನೈತೃತ್ವದಲ್ಲಿ ತನಿಖಾ ಅಪರಾಧ ತಂಡವನ್ನು ರಚಿಸಲಾಗಿತ್ತು.

ಸದರಿ ಅಪರಾಧ ಪತ್ತೆ ತಂಡದ ಅಧಿಕಾರಿ ಹಾಗೂ ಸಿಬ್ಬಂದಿ ಜನರು ಕೂಡಿಕೊಂಡು ಇದರ ಆರೋಪಿತರ ತಪಾಸಣೆಯಲ್ಲಿ ಇದ್ದಾಗ ದಿನಾಂಕ 05/02/2023 ರಂದು 03 ಘಂಟೆಗೆ ಗದ್ದನಕೆರಿ ಗ್ರಾಮದಲ್ಲಿ ಟಮ್ ಟಮ್ ವಾಹನದಲ್ಲಿ ಸಂಶಯಾಸ್ಪದ ವಾಗಿ ತಿರುಗಾಡುತ್ತಿದ್ದ ಆರೋಪಿತರು ಆದ 1) ಕಲ್ಮೇಶ್ ತಂದೆ ಈರಪ್ಪ ಗುಳನ್ನವರ 2)ಸುರೇಶ ಈರಪ್ಪ ಅಗಸರ 3)ಶಿವಾನಂದ ಸಿದ್ದಪ್ಪ ಡೊಳ್ಳಿನವರ ಎಲ್ಲರೂ ಸಾ //ಗಿರಿಸಾಗರ ತಾಲ್ಲೂಕು ಬೀಳಗಿ ಇವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಸದರಿ ಆಸಾಮಿಗಳು ಈಗ ಕಳೆದ ಎರಡು ವರ್ಷಗಳಿಂದ ಬಾಗಲಕೋಟೆ ಗ್ರಾಮೀಣ ಹಾಗೂ ಶಹರ ಮತ್ತು ಕಲಾದಗಿ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಯಲ್ಲಿ ಉಚಿತವಾಗಿ ಶಾಲಾ ಮಕ್ಕಳಿಗೆ ವಿತರಣೆ ಆಗುವ ಹಾಲಿನ ಪುಡಿ ಮತ್ತು ಒಳ್ಳೆನ್ನೇ ಪಾಕಿಟ್ ಗಳನ್ನೂ ಕಳ್ಳತನ ಮಾಡಿ ,ಕಳ್ಳತನ ಮಾಡಿದ್ದ ಹಾಲಿನ ಪುಡಿಯಿಂದ ಕವಾ ತಯಾರಿಸಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡು ತಮ್ಮ ಸ್ವ ಇಚ್ಛೆ ಹೇಳಿಕೆ ನೀಡಿದ್ದು ,ತನಿಖೆ ಕೈಗೊಂಡು ಆರೋಪಿತರಿಂದ 97 ಕೆಜಿ ಹಾಲಿನ ಪುಡಿಯಿಂದ ಕವಾ ತಯಾರಿಸಿ ಮಾರಾಟ ಮಾಡಿ ಬಂದ ಹಣ ಒಟ್ಟು 1,22.000 ರೂಪಾಯಿಗಳನ್ನು ಮತ್ತು ಕಳ್ಳತನಕ್ಕೆ ಉಪಯೋಗಿಸಿದ ಒಂದು ಟಂ ಟಂ ಗೂಡ್ಸ್ ವಾಹನವನ್ನು ಜಪ್ತಿ ಮಾಡಿಕೊಂಡು ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಇರುತ್ತದೆ.

ಈ ಕಾರ್ಯದಲ್ಲಿ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ಯ ಪಿಸೈ ರವರಾದ ಶ್ರೀ ಜನಾರ್ಧನ ಬಿ.ಮತ್ತು ಎಸೈ ಡಿ.ಸಿ.ಗುಡ್ಡಳ್ಳಿ ಮತ್ತು ಸಿಬ್ಬಂದಿ ಜನರಾದ ಆರ್. ಬಿ.ಪದರಾ ,ಎಸ್ ಬಿ ಹಣಮಗೌಡ್ರ.ರಾಜಭಕ್ಷ ನಧಾಪ.ಪ್ರದೀಪ ಪಾಟೀಲ್.ಶ್ರೀಕಾಂತ ಸೊನ್ನದ .ಎನ್ ಎಂ ಗುರಾಣಿ .ವಾಹನ ಚಾಲಕರಾದ ರಾಮಸ್ವಾಮಿ ನಾಯಕ ಹಾಗೂ ಕಲಾದಗಿ ಪೊಲೀಸ್ ಠಾಣೆಯ ಚಿದಾನಂದ ಭಜಂತ್ರಿ ಇವರು ಭಾಗವಹಿಸಿದ್ದರು.ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜನರ ಕಾರ್ಯವೈಖರಿಯನ್ನು ಮಾನ್ಯ ಎಸ್ಪಿ ಸಾಹೇಬರು ಬಾಗಲಕೋಟೆ ಜಿಲ್ಲೆ ರವರು ಶ್ಲಾಘಿಸಿದ್ದಾರೆ.

ವರದಿ :ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago