Categories: CrimeLatest

ಬಾಗಪ್ಪ ಹರಿಜನ್ ಬರ್ಬರ ಹತ್ಯೆ; ಭೀಮಾತೀರದಲ್ಲಿ ಮತ್ತೆ ಹರಿಯಿತು ರಕ್ತ!

ವಿಜಯಪುರ: ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಹತ್ಯೆಯಾಗಿದ್ದಾನೆ. ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಘಟನೆ ನಡೆದಿದೆ. ಬಾಗಪ್ಪನನ್ನು ಹಂತಕರು ಭೀಕರವಾಗಿ ಹತ್ಯೆಗೈದಿದ್ದಾರೆ.

ಭೀಮಾತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಇಂದು ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ಮಾಡಿದ್ದು, ಪರಿಣಾಮ ಬಾಗಪ್ಪ ಹರಿಜನ್ ಸಾವನ್ನಪ್ಪಿದ್ದಾನೆ. ಬಾಗಪ್ಪ ಹರಿಜನನ ಹಣೆಯ ಭಾಗ, ಮುಖ, ಎದೆಗೆ ದುಷ್ಕರ್ಮಿಗಳು ಕೊಚ್ಚಿದು ಎಡಗೈಯನ್ನು ಸಹ ಕತ್ತರಿಸಿದ್ದಾರೆ.

ಸುಮಾರು 8:50ರ ಸಮಯಕ್ಕೆ ಘಟನೆ ನಡೆದಿದ್ದು, ಬಾಗಪ್ಪ ಹರಿಜನ್ ತಾನು ವಾಸವಿದ್ದ ಮನೆಯಿಂದ ಹೊರ ಬರುತ್ತಿದ್ದಂತೆ ಸುಮಾರು 4-5 ಜನರ ಗುಂಪು ಆತನ ಮೇಲೆ ಹಲ್ಲೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಭೀಮಾತೀರದಲ್ಲಿ ಮತ್ತೆ ರಕ್ತದ ಓಕುಳಿ ಹರಿದಿದೆ. ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ ಒಡಲಿಗೆ ಮತ್ತೆ ರುಧಿರದ ಅರ್ಪಣೆ ಆಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಫೈರಿಂಗ್ ನಡೆದಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಇದೀಗ ಹಂತಕರು ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಗಾಂಧಿ ಚೌಕ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪೊಲೀಸರ ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳಬೇಕಿದೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago