Categories: CrimeLatest

ಬಾಗಪ್ಪ ಹರಿಜನ್ ಬರ್ಬರ ಹತ್ಯೆ; ಭೀಮಾತೀರದಲ್ಲಿ ಮತ್ತೆ ಹರಿಯಿತು ರಕ್ತ!

ವಿಜಯಪುರ: ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಹತ್ಯೆಯಾಗಿದ್ದಾನೆ. ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಘಟನೆ ನಡೆದಿದೆ. ಬಾಗಪ್ಪನನ್ನು ಹಂತಕರು ಭೀಕರವಾಗಿ ಹತ್ಯೆಗೈದಿದ್ದಾರೆ.

ಭೀಮಾತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಇಂದು ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ಮಾಡಿದ್ದು, ಪರಿಣಾಮ ಬಾಗಪ್ಪ ಹರಿಜನ್ ಸಾವನ್ನಪ್ಪಿದ್ದಾನೆ. ಬಾಗಪ್ಪ ಹರಿಜನನ ಹಣೆಯ ಭಾಗ, ಮುಖ, ಎದೆಗೆ ದುಷ್ಕರ್ಮಿಗಳು ಕೊಚ್ಚಿದು ಎಡಗೈಯನ್ನು ಸಹ ಕತ್ತರಿಸಿದ್ದಾರೆ.

ಸುಮಾರು 8:50ರ ಸಮಯಕ್ಕೆ ಘಟನೆ ನಡೆದಿದ್ದು, ಬಾಗಪ್ಪ ಹರಿಜನ್ ತಾನು ವಾಸವಿದ್ದ ಮನೆಯಿಂದ ಹೊರ ಬರುತ್ತಿದ್ದಂತೆ ಸುಮಾರು 4-5 ಜನರ ಗುಂಪು ಆತನ ಮೇಲೆ ಹಲ್ಲೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಭೀಮಾತೀರದಲ್ಲಿ ಮತ್ತೆ ರಕ್ತದ ಓಕುಳಿ ಹರಿದಿದೆ. ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ ಒಡಲಿಗೆ ಮತ್ತೆ ರುಧಿರದ ಅರ್ಪಣೆ ಆಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಫೈರಿಂಗ್ ನಡೆದಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಇದೀಗ ಹಂತಕರು ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಗಾಂಧಿ ಚೌಕ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪೊಲೀಸರ ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳಬೇಕಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

21 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

21 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

21 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

21 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago