Latest

ಬಾಗಪ್ಪ ಹರಿಜನ್ ಹತ್ಯೆ: ಸೇಡು, ಅನುಮಾನ ಮತ್ತು ನಿಗೂಢ ತಿರುವು!

ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದೀತೀರ ಮತ್ತೊಮ್ಮೆ ರಕ್ತಸಿಕ್ತವಾಗಿದ್ದು, ಹಂತಕ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಬಂದಿದೆ. ಈ ಹತ್ಯೆ ಸಂಬಂಧ ಬಾಗಪ್ಪನ ಪುತ್ರಿ ಗಂಗೂಬಾಯಿ, ಪಿಂಟು ಅಲಿಯಾಸ್ ಪ್ರಕಾಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.

ಪಿಂಟು ವಾಟ್ಸಪ್ ಸ್ಟೇಟಸ್: ಕೊಲೆಗೆ ಕನ್ನಡಿ?

ಬಾಗಪ್ಪ ಹತ್ಯೆಯಾದ ಕೆಲವೇ ಸಮಯದ ನಂತರ, ಪಿಂಟು ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ “ಅಣ್ಣ, ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಬರೆಯುತ್ತಿದ್ದ. ಈ ಸ್ಟೇಟಸ್ ಅನುಮಾನಕ್ಕೆ ಎಡೆಮಾಡಿಕೊಡಿದ್ದು, ಇದರಿಂದಲೇ ಪಿಂಟುವಿನ ವಿರುದ್ಧ ಗಂಭೀರ ಆರೋಪಗಳು ಹೊರಡಲು ಕಾರಣವಾಯಿತು.

ಬಾಗಪ್ಪ – ವಕೀಲ ರವಿ – ಪಿಂಟು: ಸೇಡು ತೀರಿಸುವ ಕುತಂತ್ರ?

ಪಿಂಟು ಅಗರಖೇಡ ಬೇರೆ ಯಾರೂ ಅಲ್ಲ, ಕಳೆದ ವರ್ಷ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವಕೀಲ ರವಿ ಅಗರಖೇಡ್‌ನ ಸಹೋದರ.

ರವಿ ಅಗರಖೇಡ್ ಮತ್ತು ಬಾಗಪ್ಪ ಹರಿಜನ್ ದೂರದ ಸಂಬಂಧಿಕರು ಎಂದು ಹೇಳಲಾಗಿದ್ದು, ಕಳೆದ ವರ್ಷ ವಿಜಯಪುರದಲ್ಲಿ ನಡೆದ ರವಿ ಅವರ ಭೀಕರ ಅಪಘಾತದ ಬಳಿಕ ಪಿಂಟು, ಬಾಗಪ್ಪನ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಎಂಬ ಮಾತುಗಳು ಕೇಳಿ ಬರುತ್ತಿವೆ.

ವಕೀಲ ರವಿ ಅಪಘಾತ:

ವಿಜಯಪುರ ಕೋರ್ಟ್‌ನಿಂದ ವಾಪಸ್ಸಾಗುವ ವೇಳೆ ರವಿ ಸ್ಕೂಟಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದು, ಅವರನ್ನು ಸುಮಾರು 2 ಕಿ.ಮೀ.ವರೆಗೆ ಎಳೆದುಕೊಂಡು ಹೋದ ಭೀಕರ ಘಟನೆ ನಡೆದಿತ್ತು.

ಈ ಘಟನೆ ಪಿಂಟುವಿಗೆ ಶಾಕ್ ನೀಡಿತ್ತು, ಮತ್ತು ಸೋಶಿಯಲ್ ಮೀಡಿಯಾದಲ್ಲಿ ಸಹೋದರನ ಹತ್ಯೆಗೆ ನ್ಯಾಯ ಬೇಕು ಎಂದು ಪಿಂಟು ಆಗಾಗ್ ಹೇಳುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಹತ್ಯೆ ಪ್ರಕರಣ ತೀವ್ರ ತನಿಖೆ:

ಬಾಗಪ್ಪನ ಮಗಳು ಗಂಗೂಬಾಯಿ, ಪಿಂಟು ಮೇಲೆ ನೇರವಾಗಿ ಹತ್ಯೆ ಆರೋಪ ಮಾಡಿ ದೂರು ದಾಖಲಿಸಿದ್ದಾಳೆ. ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ವಾಟ್ಸಪ್ ಸ್ಟೇಟಸ್ ಮತ್ತು ಹತ್ಯೆಗೆ ಸಂಬಂಧಿಸಿದ ಪತ್ತೆದಾರಿ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಹತ್ಯೆ ಪ್ರಕರಣದ ಸತ್ಯ ಹೊರಬರುವ ತನಕ ಭೀಮಾ ತೀರದ ಜನತೆ ಆತಂಕದಲ್ಲಿ ಮುಳುಗಿದ್ದಾರೆ. ಪಿಂಟು ನಿಜವಾಗಲೂ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಿದನೇ? ಅಥವಾ ಇದು ಕೇವಲ ಅನುಮಾನವೇ? ಈ ವಿಷಯದಲ್ಲಿ ಮತ್ತಷ್ಟು ಬೆಳವಣಿಗೆಗಳಿಗಾಗಿ ಕಾದು ನೋಡಬೇಕಾಗಿದೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago