Latest

ಮೈಕ್ರೊ ಪೈನಾನ್ಸ್ ದೌರ್ಜನ್ಯ ವಿರುದ್ಧ ಬಾಗೇಪಲ್ಲಿ ಮಹಿಳೆಯರ ಆಕ್ರೋಶ

ಬಾಗೇಪಲ್ಲಿ: ಮೈಕ್ರೊ ಪೈನಾನ್ಸ್ ಸಂಸ್ಥೆಗಳ ಸಾಲ ವಸೂಲಿ ಕ್ರಮಗಳ ವಿರುದ್ಧ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಮುಖ್ಯರಸ್ತೆಯಲ್ಲಿ ಜಾಥಾ ನಡೆಸಿದ ಮಹಿಳೆಯರು, ನಂತರ ತಾಲೂಕು ಕಚೇರಿಯ ಎದುರು ಧರಣಿ ನಡೆಸಿ ತಹಸೀಲ್ದಾರ್ ಮನಿಷಾ ಎನ್. ಪತ್ರಿ ಅವರಿಗೆ ಮನವಿ ಸಲ್ಲಿಸಿದರು.

ಬಲವಂತದ ವಸೂಲಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕಿ ಸಾವಿತ್ರಮ್ಮ ಮಾತನಾಡಿ, ಮೈಕ್ರೊ ಪೈನಾನ್ಸ್ ಸಂಸ್ಥೆಗಳು ಮಹಿಳೆಯರಿಗೆ ಬಲವಂತವಾಗಿ ಸಾಲ ನೀಡಿ ನಂತರ ಅದನ್ನು ವಾಪಸು ಪಡೆಯುವ ವೇಳೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಬಗ್ಗೆ ಕಿಡಿಕಾರಿದರು. ಇಂತಹ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳು ಪಡೆದಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು ಮತ್ತು ಈ ರೀತಿಯ ದೌರ್ಜನ್ಯಕ್ಕೆ ತಡೆಯೊಡ್ಡಲು ಕಟ್ಟುನಿಟ್ಟಿನ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಪಾರದರ್ಶಕತೆ ಮತ್ತು ಸರ್ಕಾರದ ಹಸ್ತಕ್ಷೇಪದ ಅಗತ್ಯ

ಸಿಪಿಐಎಂ ಮುಖಂಡ ಚನ್ನರಾಯಪ್ಪ ಮಾತನಾಡಿ, ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಾರ್ಯವಿಧಾನದಲ್ಲಿ ಪಾರದರ್ಶಕತೆ ಕಾಪಾಡಲು ಹೊಸ ನಿಯಮಾವಳಿ ರೂಪಿಸಬೇಕೆಂದರು. ಈಗಾಗಲೇ ವಸೂಲಿ ಮಾಡಿರುವ ಅಧಿಕ ಬಡ್ಡಿ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿಯಲ್ಲಿ ನೇರವಾಗಿ ಬಡವರಿಗೆ ಸಾಲ ನೀಡುವ ವ್ಯವಸ್ಥೆ ಮಾಡಬೇಕು. ಸ್ವಯಂ ಉದ್ಯೋಗ ಪ್ರೋತ್ಸಾಹಿಸುವ ಮಹಿಳೆಯರಿಗೆ ಕನಿಷ್ಠ ₹5 ಲಕ್ಷದವರೆಗೆ ಸರಳ ನಿಯಮಾವಳಿಯಡಿ ಬ್ಯಾಂಕ್ ಸಾಲ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದಿಂದ ಕಾನೂನು ಜಾರಿಗೆ ಒತ್ತಾಯ

ಪ್ರತಿಭಟನೆಯ ಭಾಗವಾಗಿ ಜನವಾದಿ ಮಹಿಳಾ ಸಂಘಟನೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿತು. ಮೈಕ್ರೊ ಪೈನಾನ್ಸ್ ಸಂಸ್ಥೆಗಳ ಬಲವಂತದ ವಸೂಲಿ ಕ್ರಮಗಳಿಗೆ ನಿಯಂತ್ರಣ ಹಾಕಲು ಹೊಸ ಕಾನೂನು ಜಾರಿಯಾಗಬೇಕು. ಮಹಿಳಾ ಸ್ವಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ದೀರ್ಘಾವಧಿ ಸಾಲವನ್ನು ಸಬ್ಸಿಡಿ ಸಹಿತವಾಗಿ ಸರ್ಕಾರವೇ ವಿತರಿಸಬೇಕೆಂದು ಸಾವಿತ್ರಮ್ಮ ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಮುಖಂಡರಾದ ಸೋಮಶೇಖರ್, ಎಸ್. ಲಕ್ಷ್ಮಣರೆಡ್ಡಿ ಹಾಗೂ ಸಂತ್ರಸ್ತ ಮಹಿಳೆಯರು ಸೇರಿದಂತೆ ಹಲವಾರು ಜನರು ಭಾಗವಹಿಸಿದರು.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago