Latest

ಮೈಕ್ರೊ ಪೈನಾನ್ಸ್ ದೌರ್ಜನ್ಯ ವಿರುದ್ಧ ಬಾಗೇಪಲ್ಲಿ ಮಹಿಳೆಯರ ಆಕ್ರೋಶ

ಬಾಗೇಪಲ್ಲಿ: ಮೈಕ್ರೊ ಪೈನಾನ್ಸ್ ಸಂಸ್ಥೆಗಳ ಸಾಲ ವಸೂಲಿ ಕ್ರಮಗಳ ವಿರುದ್ಧ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಮುಖ್ಯರಸ್ತೆಯಲ್ಲಿ ಜಾಥಾ ನಡೆಸಿದ ಮಹಿಳೆಯರು, ನಂತರ ತಾಲೂಕು ಕಚೇರಿಯ ಎದುರು ಧರಣಿ ನಡೆಸಿ ತಹಸೀಲ್ದಾರ್ ಮನಿಷಾ ಎನ್. ಪತ್ರಿ ಅವರಿಗೆ ಮನವಿ ಸಲ್ಲಿಸಿದರು.

ಬಲವಂತದ ವಸೂಲಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕಿ ಸಾವಿತ್ರಮ್ಮ ಮಾತನಾಡಿ, ಮೈಕ್ರೊ ಪೈನಾನ್ಸ್ ಸಂಸ್ಥೆಗಳು ಮಹಿಳೆಯರಿಗೆ ಬಲವಂತವಾಗಿ ಸಾಲ ನೀಡಿ ನಂತರ ಅದನ್ನು ವಾಪಸು ಪಡೆಯುವ ವೇಳೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಬಗ್ಗೆ ಕಿಡಿಕಾರಿದರು. ಇಂತಹ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳು ಪಡೆದಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು ಮತ್ತು ಈ ರೀತಿಯ ದೌರ್ಜನ್ಯಕ್ಕೆ ತಡೆಯೊಡ್ಡಲು ಕಟ್ಟುನಿಟ್ಟಿನ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಪಾರದರ್ಶಕತೆ ಮತ್ತು ಸರ್ಕಾರದ ಹಸ್ತಕ್ಷೇಪದ ಅಗತ್ಯ

ಸಿಪಿಐಎಂ ಮುಖಂಡ ಚನ್ನರಾಯಪ್ಪ ಮಾತನಾಡಿ, ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಾರ್ಯವಿಧಾನದಲ್ಲಿ ಪಾರದರ್ಶಕತೆ ಕಾಪಾಡಲು ಹೊಸ ನಿಯಮಾವಳಿ ರೂಪಿಸಬೇಕೆಂದರು. ಈಗಾಗಲೇ ವಸೂಲಿ ಮಾಡಿರುವ ಅಧಿಕ ಬಡ್ಡಿ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿಯಲ್ಲಿ ನೇರವಾಗಿ ಬಡವರಿಗೆ ಸಾಲ ನೀಡುವ ವ್ಯವಸ್ಥೆ ಮಾಡಬೇಕು. ಸ್ವಯಂ ಉದ್ಯೋಗ ಪ್ರೋತ್ಸಾಹಿಸುವ ಮಹಿಳೆಯರಿಗೆ ಕನಿಷ್ಠ ₹5 ಲಕ್ಷದವರೆಗೆ ಸರಳ ನಿಯಮಾವಳಿಯಡಿ ಬ್ಯಾಂಕ್ ಸಾಲ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದಿಂದ ಕಾನೂನು ಜಾರಿಗೆ ಒತ್ತಾಯ

ಪ್ರತಿಭಟನೆಯ ಭಾಗವಾಗಿ ಜನವಾದಿ ಮಹಿಳಾ ಸಂಘಟನೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿತು. ಮೈಕ್ರೊ ಪೈನಾನ್ಸ್ ಸಂಸ್ಥೆಗಳ ಬಲವಂತದ ವಸೂಲಿ ಕ್ರಮಗಳಿಗೆ ನಿಯಂತ್ರಣ ಹಾಕಲು ಹೊಸ ಕಾನೂನು ಜಾರಿಯಾಗಬೇಕು. ಮಹಿಳಾ ಸ್ವಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ದೀರ್ಘಾವಧಿ ಸಾಲವನ್ನು ಸಬ್ಸಿಡಿ ಸಹಿತವಾಗಿ ಸರ್ಕಾರವೇ ವಿತರಿಸಬೇಕೆಂದು ಸಾವಿತ್ರಮ್ಮ ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಮುಖಂಡರಾದ ಸೋಮಶೇಖರ್, ಎಸ್. ಲಕ್ಷ್ಮಣರೆಡ್ಡಿ ಹಾಗೂ ಸಂತ್ರಸ್ತ ಮಹಿಳೆಯರು ಸೇರಿದಂತೆ ಹಲವಾರು ಜನರು ಭಾಗವಹಿಸಿದರು.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

12 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

14 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

14 hours ago