ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.
ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್ಎಫ್ಒ ಎನ್.ಎಲ್ ನದಾಫ, ಡಿ.ಆರ್.ಎಸ್.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…