ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.
ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್ಎಫ್ಒ ಎನ್.ಎಲ್ ನದಾಫ, ಡಿ.ಆರ್.ಎಸ್.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…