ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.
ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್ಎಫ್ಒ ಎನ್.ಎಲ್ ನದಾಫ, ಡಿ.ಆರ್.ಎಸ್.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…