ಶಿವಮೊಗ್ಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಐವರು ಆರೋಪಿಗಳಿಗೆ ಜಾಮೀನು ನೀಡಿರುವ ಘಟನೆ ಬಯಲಿಗೆ ಬಂದಿದೆ. ಪ್ರಕರಣದ ಬೆಳಕು ವಿಚಾರಣೆಯೊಂದರ ಸಂದರ್ಭದಲ್ಲಿ ಹೊರಬಿದ್ದಿದ್ದು, ಸುಹೇಲ್ ಎಂಬ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗದ ಕಾರಣ ಈ ವಂಚನೆ ಬಗ್ಗೆ ಅನುಮಾನ ಉಂಟಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದ ಜಗದೀಶ್ ಎಂಬುವವರು ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್ ಮತ್ತು ಸುಹೇಲ್ ಎಂಬ ಐದು ಮಂದಿಗೆ ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದಾರೆ ಎಂದು ದಾಖಲಾಗಿತ್ತು. ಆದರೆ, ವಿಚಾರಣೆ ವೇಳೆ ಸುಹೇಲ್ ಹಾಜರಾಗದ ಕಾರಣ, ನ್ಯಾಯಾಲಯವು ಜಾಮೀನುದಾರನಿಗೆ ನೋಟಿಸ್ ನೀಡಿತು.
ನ್ಯಾಯಾಲಯಕ್ಕೆ ಹಾಜರಾದ ಜಗದೀಶ್, ತಾನು ಯಾರಿಗೂ ಜಾಮೀನು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಜಾಮೀನು ದಾಖಲೆಗಳಲ್ಲಿ ಬಳಸಲಾದ ಫೋಟೋ ಕೂಡ ತಮ್ಮದು ಅಲ್ಲ, ಮತ್ತು ಆರೋಪಿಗಳನ್ನು ಪರಿಚಯವಿಲ್ಲ ಎಂದು ನ್ಯಾಯಾಧೀಶರ ಮುಂದೆ ತಿಳಿಸಿದ್ದಾರೆ.
ಇದರಿಂದಾಗಿ, ಅಪರಿಚಿತ ವ್ಯಕ್ತಿಯೊಬ್ಬರು ನಕಲಿ ದಾಖಲೆ ಸೃಷ್ಟಿಸಿ ಜಗದೀಶ್ ಹೆಸರಿನಲ್ಲಿ ಜಾಮೀನು ನೀಡಿರುವುದು ಬಹಿರಂಗಗೊಂಡಿದೆ. ಈ ಬಗ್ಗೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಜಾಮೀನುದಾರನಾಗಿ ಬಂದ ವ್ಯಕ್ತಿ, ಆತನನ್ನು ಕರೆತಂದ ನಸರುಲ್ಲಾ, ಮತ್ತು ಐದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…