ಬಂಗಾರಪೇಟೆಯಲ್ಲಿ ನಡೆದ ಚಿನ್ನ ಮತ್ತು ಬೆಳ್ಳಿ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ. ಈ ಆರೋಪಿಯಿಂದ ₹4.17 ಲಕ್ಷ ಮೌಲ್ಯದ 43 ಗ್ರಾಂ ಚಿನ್ನ ಹಾಗೂ 1 ಕೆ.ಜಿ 454 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳ್ಳತನಕ್ಕೆ ಶಿಕಾರಾದವರು ಬಂಗಾರಪೇಟೆ ನಿವಾಸಿ ಲಕ್ಷ್ಮಿದೇವಮ್ಮ. ಅವರು ಮೂರು ದಿನಗಳ ಕಾಲ ತಮ್ಮ ತವರು ಮನೆಗೆ ತೆರಳಿದ್ದ ಸಂದರ್ಭದಲ್ಲಿ, ಯಾರೋ ಮನೆಯ ಬೀಗ ಮುರಿದು ಒಳನುಗ್ಗಿ ಆಭರಣಗಳನ್ನು ಕದಿದಿದ್ದರು. ಈ ಸಂಬಂಧ ಅವರು ಏಪ್ರಿಲ್ 28ರಂದು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಕೇಸ್ ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು ಅತೀ ಕಡಿಮೆ ಅವಧಿಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತ ಮಹಿಳೆ ಬಂಗಾರಪೇಟೆಯ ರುಕ್ಕಮ್ಮ ಎನ್ನಲಾಗಿದೆ.
ಈ ಕಾರ್ಯಾಚರಣೆ ಕೆಜಿಎಫ್ ಎಸ್ಪಿ ಕೆ.ಎಂ. ಶಾಂತರಾಜು ಮತ್ತು ಡಿವೈಎಸ್ಪಿ ಎಸ್. ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆರ್. ದಯಾನಂದ್ ನೇತೃತ್ವದಲ್ಲಿ ಪಿಎಸ್ಐ ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿ ನಾಗೇಶ್, ಚಲಪತಿ, ಮಧುಕುಮಾರ್, ಸುನೀಲ್ ಮತ್ತು ಮುನೇಂದ್ರ ಕೆಲಸ ಮಾಡಿದ್ದಾರೆ.
ಅಪರಾಧ ವಿಚಾರಣೆಯಲ್ಲಿ ತಕ್ಷಣ ಸ್ಪಂದಿಸಿದ ಮತ್ತು ಆಭರಣಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದ ಕಾರ್ಯಕ್ಷಮತೆಗೆ ಎಸ್ಪಿ ಶಾಂತರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವರದಿ: ರೋಶನ್
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…