Latest

ಬಂಗಾರಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ; 2 ಕೆಜಿ 735 ಗ್ರಾಂ ಗಾಂಜಾ – ಪೆಡ್ಲರ್ ವಶ.

ಬಂಗಾರಪೇಟೆ: ದಿನಾಂಕ 05.04.2025 ರಂದು ಮಧ್ಯ ರಾತ್ರಿ 12.30 ಗಂಟೆ ಸಮಯದಲ್ಲಿ ಹುದುಕುಳ ಗೇಟ್ ಬಳಿ ಗಲಾಟೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಮಾಹಿತಿಯ ಮೇರೆಗೆ ಇ. ಆರ್. ಎಸ್. ಸಿಬ್ಬಂದಿ 3 ಜನರನ್ನು ಠಾಣೆಗೆ ಕರೆದುಕೊಂಡು ಬಂದು ಹಾಜರುಪಡಿಸಿ ಠಾಣಾ ಪಿ.ಐ ಶದಯಾನಂದ್.ಆರ್ ರವರು ಕೂಲಂಕೂಷ ವಿಚಾರಣೆ ನಡೆಸಿ ಈ ವ್ಯಕ್ತಿಗಳು ಗಾಂಜಾ ಮಾರಾಟಕ್ಕೆ ಬಂದಿರುವುದಾಗಿ ಹುದುಕುಳ ಸಮೀಪ ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟಿರುವುದನ್ನು ತಿಳಿಸಿದಾಗ ಈ ವಿಷಯವನ್ನು ಮೇಲಾಧಿಕಾರಿಗಳಾದ ಎಸ್.ಪಿ. ಶಾಂತರಾಜು ಕೆ.ಎಂ ಐ.ಪಿ.ಎಸ್ ಮತ್ತು ಡಿವೈ.ಎಸ್.ಪಿ. ಪಾಂಡುರಂಗ ಕೆ.ಎಸ್.ಪಿ.ಎಸ್ ಕೆಜಿಎಫ್ ರವರ ಗಮನಕ್ಕೆ ತಂದಾಗ ಮೇಲಾಧಿಕಾರಗಳ ಆದೇಶದ ಮೇರೆಗೆ ಪತ್ರಾಂಕಿತ ಅಧಿಕಾರಿ ಯುವರಾಜ್ ಮತ್ತು ಸರ್ಕಾರಿ ಸಾಕ್ಷಿದಾರರೊಂದಿಗೆ ದಾಳಿ ನಡೆಸಿದಾಗ ಆಟೋ ಸಂಖ್ಯೆ ಕೆಎ.03.ಎಎಂ.6052 ರಲ್ಲಿ 2 ಕೆಜಿ 735 ಗ್ರಾಂ ಗಾಂಜಾ ಮಾರಾಟಕ್ಕಾಗಿ ಇಟ್ಟುಕೊಂಡಿರುವುದು ಧೃಡಪಟ್ಟಿದ್ದು ಪಿ.ಐ ದಯಾನಂದ್.ಆರ್ ರವರು ಅಮಾನತ್ತು ಪಡಿಸಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿತರು ಬೆಂಗಳೂರು ವಾಸಿಗಳೆಂದು ಮತ್ತೊಬ್ಬ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿರುವುದಾಗಿ ಪೊಲೀಸರು ಆತನ ಪತ್ತೆ ಕಾರ್ಯವನ್ನು ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಬಂಗಾರಪೇಟೆ ಪಿ.ಐ ದಯಾನಂದ್.ಆರ್, ರಾಜಣ್ಣ ಪಿ.ಎಸ್.ಐ, ಪ್ರಕಾಶ್ ನರಸಿಂಗ್ ಪಿ.ಎಸ್.ಐ, ರಮೇಶ್ ಎ.ಎಸ್.ಐ ಮತ್ತು ಸಿಬ್ಬಂದಿ ಯವರಾದ ನಾಗೇಶ್, ಚಲಪತಿ, ವೆಂಕಟೇಶ್, ಮಧುಕುಮಾರ್ ಮುನೇಂದ್ರ, ಶಿವರಾಜು ರವರ ಕಾರ್ಯವನ್ನು ಮೆಚ್ಚಿ ಶಾಂತರಾಜು ಕೆ.ಎಂ ಪೊಲೀಸ್ ಅಧೀಕ್ಷಕರು ಕೆ.ಜಿ.ಎಪ್ ರವರು ಪ್ರಶಂಸಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago