ಬಂಗಾರಪೇಟೆ: ದಿನಾಂಕ 05.04.2025 ರಂದು ಮಧ್ಯ ರಾತ್ರಿ 12.30 ಗಂಟೆ ಸಮಯದಲ್ಲಿ ಹುದುಕುಳ ಗೇಟ್ ಬಳಿ ಗಲಾಟೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಮಾಹಿತಿಯ ಮೇರೆಗೆ ಇ. ಆರ್. ಎಸ್. ಸಿಬ್ಬಂದಿ 3 ಜನರನ್ನು ಠಾಣೆಗೆ ಕರೆದುಕೊಂಡು ಬಂದು ಹಾಜರುಪಡಿಸಿ ಠಾಣಾ ಪಿ.ಐ ಶದಯಾನಂದ್.ಆರ್ ರವರು ಕೂಲಂಕೂಷ ವಿಚಾರಣೆ ನಡೆಸಿ ಈ ವ್ಯಕ್ತಿಗಳು ಗಾಂಜಾ ಮಾರಾಟಕ್ಕೆ ಬಂದಿರುವುದಾಗಿ ಹುದುಕುಳ ಸಮೀಪ ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟಿರುವುದನ್ನು ತಿಳಿಸಿದಾಗ ಈ ವಿಷಯವನ್ನು ಮೇಲಾಧಿಕಾರಿಗಳಾದ ಎಸ್.ಪಿ. ಶಾಂತರಾಜು ಕೆ.ಎಂ ಐ.ಪಿ.ಎಸ್ ಮತ್ತು ಡಿವೈ.ಎಸ್.ಪಿ. ಪಾಂಡುರಂಗ ಕೆ.ಎಸ್.ಪಿ.ಎಸ್ ಕೆಜಿಎಫ್ ರವರ ಗಮನಕ್ಕೆ ತಂದಾಗ ಮೇಲಾಧಿಕಾರಗಳ ಆದೇಶದ ಮೇರೆಗೆ ಪತ್ರಾಂಕಿತ ಅಧಿಕಾರಿ ಯುವರಾಜ್ ಮತ್ತು ಸರ್ಕಾರಿ ಸಾಕ್ಷಿದಾರರೊಂದಿಗೆ ದಾಳಿ ನಡೆಸಿದಾಗ ಆಟೋ ಸಂಖ್ಯೆ ಕೆಎ.03.ಎಎಂ.6052 ರಲ್ಲಿ 2 ಕೆಜಿ 735 ಗ್ರಾಂ ಗಾಂಜಾ ಮಾರಾಟಕ್ಕಾಗಿ ಇಟ್ಟುಕೊಂಡಿರುವುದು ಧೃಡಪಟ್ಟಿದ್ದು ಪಿ.ಐ ದಯಾನಂದ್.ಆರ್ ರವರು ಅಮಾನತ್ತು ಪಡಿಸಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿತರು ಬೆಂಗಳೂರು ವಾಸಿಗಳೆಂದು ಮತ್ತೊಬ್ಬ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿರುವುದಾಗಿ ಪೊಲೀಸರು ಆತನ ಪತ್ತೆ ಕಾರ್ಯವನ್ನು ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಬಂಗಾರಪೇಟೆ ಪಿ.ಐ ದಯಾನಂದ್.ಆರ್, ರಾಜಣ್ಣ ಪಿ.ಎಸ್.ಐ, ಪ್ರಕಾಶ್ ನರಸಿಂಗ್ ಪಿ.ಎಸ್.ಐ, ರಮೇಶ್ ಎ.ಎಸ್.ಐ ಮತ್ತು ಸಿಬ್ಬಂದಿ ಯವರಾದ ನಾಗೇಶ್, ಚಲಪತಿ, ವೆಂಕಟೇಶ್, ಮಧುಕುಮಾರ್ ಮುನೇಂದ್ರ, ಶಿವರಾಜು ರವರ ಕಾರ್ಯವನ್ನು ಮೆಚ್ಚಿ ಶಾಂತರಾಜು ಕೆ.ಎಂ ಪೊಲೀಸ್ ಅಧೀಕ್ಷಕರು ಕೆ.ಜಿ.ಎಪ್ ರವರು ಪ್ರಶಂಸಿಸಿದ್ದಾರೆ. ವರದಿ: ರೋಶನ್ ಜಮೀರ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…