Latest

ನಾಲ್ಕು ತಿಂಗಳ ಹಿಂದೆ ನಡೆದ ಕೊಲೆ ಬೆದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಗಾರಪೇಟೆ ಪೊಲೀಸ್

ನಾಲ್ಕು ತಿಂಗಳ ಹಿಂದೆ ನಡೆದ ಕೊಲೆ ಬೆದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಗಾರಪೇಟೆ ಪೊಲೀಸರಿಗೆ ಪ್ರಶಂಸೆ ವ್ಯಕ್ತಪಡಿಸಿದ ಕೆ.ಜೆ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ಧರಣಿ ದೇವಿ. ಐಪಿಎಸ್.

ದಿನಾಂಕ 22/04/2022 ರಂದು ಶ್ರೀ ವೆಂಕಟೇಶ್ .ಸಿ ಬಿನ್ ಲೇಟ್ ಚಿನ್ನಪ್ಪ ಕೆರೆಕೋಡಿ ಬಂಗಾರಪೇಟೆ ರವರು ಬಂಗಾರಪೇಟೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ ಅಲಿಯಾಸ್ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ಗ್ರಾಮದ ರುದ್ರ ಭೂಮಿ ಸ್ಮಶಾನದ ಬಳಿ ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದು ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿತ್ತು.

ಪ್ರಕರಣದಲ್ಲಿ ಮೃತನಾದ ಹರೀಶ್ ಅಲಿಯಾಸ್ ಕಬಾಬ್ ಎಂಬಾತನನ್ನು ಕೊಲೆ ಮಾಡಿರುವ ಆರೋಪಿ ಯಾರೆಂದು ಗೊತ್ತಿಲ್ಲದೆ ಇದ್ದು ನಂತರ ಕೇಸಿನಲ್ಲಿ ಆರೋಪಿಯನ್ನು ಪತ್ತೆ ಮಾಡಲು ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ಧರಣಿ ದೇವಿ ಐಪಿಎಸ್ ರವರ ಆದೇಶದ ಮೇರೆಗೆ ಪೊಲೀಸ್ ಉಪಾಧೀಕ್ಷಕರಾದ ವಿ.ಎಲ್ ರಮೇಶ್ ರವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಂಜೀವ್ ರಾಯಪ್ಪ ಹಾಗೂ ಪಿ.ಎಸ್.ಐ ಸುನಿಲ್ ಹಾಗೂ ಸಿಬ್ಬಂದಿಯವರಾದ ಅನಿಲ್ ಕುಮಾರ್, ರಾಮಕೃಷ್ಣ ರೆಡ್ಡಿ, ಮಂಜುನಾಥ್ ರೆಡ್ಡಿ, ನಾಗೇಶ್ ಮತ್ತು ಮುನಾವರ್ ಪಾಷಾ ರವರನ್ನು ನೇಮಿಸಿದ್ದರು. ಅದರಂತೆ ಬಾತ್ಮಿ ದಾರದಿಂದ ಮಾಹಿತಿಯನ್ನು ಪಡೆದು ಪತ್ತೆ ಕಾರ್ಯ ಕೈಗೊಂಡಿದ್ದು ಮಾಹಿತಿಯ ಮೇರೆಗೆ ಆರೋಪಿ ಸೂರ್ಯ ಅಲಿಯಾಸ್ ಗೋವಿಂದ ಬಿನ್ ಲೇಟ್ ವಿಜಯ್ ಕುಮಾರ್ ವಯಸ್ಸು 23 ಪೇಂಟಿಂಗ್ ಕೆಲಸ ಮಾಡುತ್ತಿದ್ದ ಕೆರೆ ಕೋಡಿ ಗ್ರಾಮ ಬಂಗಾರಪೇಟೆಯ ವಾಸಿತ ಆರೋಪಿಯನ್ನು ದಿನಾಂಕ 15/09/2022 ರಂದು ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಿದಾಗ ತಾನು ಹರೀಶ್ ಅಲಿಯಾಸ್ ಕಬಾಬ್ ನನ್ನ ಒಡೆಯಲು ಕರೆದುಕೊಂಡು ಹೋಗಿ ಮಧ್ಯವನ್ನು ಕುಡಿಸಿ ಸಾಯಿಸುವ ಉದ್ದೇಶದಿಂದ ಕೆಳಗೆ ತಳ್ಳಿ ಪಕ್ಕದಲ್ಲಿಯೇ ಇದ್ದ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ತಲೆಯ ಮೇಲೆ ಹಾಕಿ ನಂತರ ಕುಡಿಯಲು ತಂದಿದ್ದ ಬೀರ್ ಬಾಟಲ್ ಹೊಡೆದು ಬಾಟಲ್ ಚೂಪಾದ ಗಾಜಿನಿಂದ ಕಬಾಬ್ ಎಂಬಾತನ ಕುತ್ತಿಗೆಗೆ ತಿವಿದು ಕೊಲೆ ಮಾಡಿರುವುದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ನಂತರ ದಸ್ತಗಿರಿ ಮಾಡಿರುತ್ತಾರೆ.

ಈ ಕೊಲೆ ಪ್ರಕರಣದಲ್ಲಿ ಆರೋಪಿಯು ಯಾರೆಂದು ಖಚಿತವಾಗಿ ತಿಳಿಯದೆ ಇದ್ದರೂ ಸಹ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿರುವುದನ್ನು ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ಧರಣಿ ದೇವಿ ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ -ರೋಶನ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago