Latest

ನಾಲ್ಕು ತಿಂಗಳ ಹಿಂದೆ ನಡೆದ ಕೊಲೆ ಬೆದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಗಾರಪೇಟೆ ಪೊಲೀಸ್

ನಾಲ್ಕು ತಿಂಗಳ ಹಿಂದೆ ನಡೆದ ಕೊಲೆ ಬೆದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಗಾರಪೇಟೆ ಪೊಲೀಸರಿಗೆ ಪ್ರಶಂಸೆ ವ್ಯಕ್ತಪಡಿಸಿದ ಕೆ.ಜೆ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ಧರಣಿ ದೇವಿ. ಐಪಿಎಸ್.

ದಿನಾಂಕ 22/04/2022 ರಂದು ಶ್ರೀ ವೆಂಕಟೇಶ್ .ಸಿ ಬಿನ್ ಲೇಟ್ ಚಿನ್ನಪ್ಪ ಕೆರೆಕೋಡಿ ಬಂಗಾರಪೇಟೆ ರವರು ಬಂಗಾರಪೇಟೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ ಅಲಿಯಾಸ್ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ಗ್ರಾಮದ ರುದ್ರ ಭೂಮಿ ಸ್ಮಶಾನದ ಬಳಿ ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದು ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿತ್ತು.

ಪ್ರಕರಣದಲ್ಲಿ ಮೃತನಾದ ಹರೀಶ್ ಅಲಿಯಾಸ್ ಕಬಾಬ್ ಎಂಬಾತನನ್ನು ಕೊಲೆ ಮಾಡಿರುವ ಆರೋಪಿ ಯಾರೆಂದು ಗೊತ್ತಿಲ್ಲದೆ ಇದ್ದು ನಂತರ ಕೇಸಿನಲ್ಲಿ ಆರೋಪಿಯನ್ನು ಪತ್ತೆ ಮಾಡಲು ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ಧರಣಿ ದೇವಿ ಐಪಿಎಸ್ ರವರ ಆದೇಶದ ಮೇರೆಗೆ ಪೊಲೀಸ್ ಉಪಾಧೀಕ್ಷಕರಾದ ವಿ.ಎಲ್ ರಮೇಶ್ ರವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಂಜೀವ್ ರಾಯಪ್ಪ ಹಾಗೂ ಪಿ.ಎಸ್.ಐ ಸುನಿಲ್ ಹಾಗೂ ಸಿಬ್ಬಂದಿಯವರಾದ ಅನಿಲ್ ಕುಮಾರ್, ರಾಮಕೃಷ್ಣ ರೆಡ್ಡಿ, ಮಂಜುನಾಥ್ ರೆಡ್ಡಿ, ನಾಗೇಶ್ ಮತ್ತು ಮುನಾವರ್ ಪಾಷಾ ರವರನ್ನು ನೇಮಿಸಿದ್ದರು. ಅದರಂತೆ ಬಾತ್ಮಿ ದಾರದಿಂದ ಮಾಹಿತಿಯನ್ನು ಪಡೆದು ಪತ್ತೆ ಕಾರ್ಯ ಕೈಗೊಂಡಿದ್ದು ಮಾಹಿತಿಯ ಮೇರೆಗೆ ಆರೋಪಿ ಸೂರ್ಯ ಅಲಿಯಾಸ್ ಗೋವಿಂದ ಬಿನ್ ಲೇಟ್ ವಿಜಯ್ ಕುಮಾರ್ ವಯಸ್ಸು 23 ಪೇಂಟಿಂಗ್ ಕೆಲಸ ಮಾಡುತ್ತಿದ್ದ ಕೆರೆ ಕೋಡಿ ಗ್ರಾಮ ಬಂಗಾರಪೇಟೆಯ ವಾಸಿತ ಆರೋಪಿಯನ್ನು ದಿನಾಂಕ 15/09/2022 ರಂದು ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಿದಾಗ ತಾನು ಹರೀಶ್ ಅಲಿಯಾಸ್ ಕಬಾಬ್ ನನ್ನ ಒಡೆಯಲು ಕರೆದುಕೊಂಡು ಹೋಗಿ ಮಧ್ಯವನ್ನು ಕುಡಿಸಿ ಸಾಯಿಸುವ ಉದ್ದೇಶದಿಂದ ಕೆಳಗೆ ತಳ್ಳಿ ಪಕ್ಕದಲ್ಲಿಯೇ ಇದ್ದ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ತಲೆಯ ಮೇಲೆ ಹಾಕಿ ನಂತರ ಕುಡಿಯಲು ತಂದಿದ್ದ ಬೀರ್ ಬಾಟಲ್ ಹೊಡೆದು ಬಾಟಲ್ ಚೂಪಾದ ಗಾಜಿನಿಂದ ಕಬಾಬ್ ಎಂಬಾತನ ಕುತ್ತಿಗೆಗೆ ತಿವಿದು ಕೊಲೆ ಮಾಡಿರುವುದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ನಂತರ ದಸ್ತಗಿರಿ ಮಾಡಿರುತ್ತಾರೆ.

ಈ ಕೊಲೆ ಪ್ರಕರಣದಲ್ಲಿ ಆರೋಪಿಯು ಯಾರೆಂದು ಖಚಿತವಾಗಿ ತಿಳಿಯದೆ ಇದ್ದರೂ ಸಹ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿರುವುದನ್ನು ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ಧರಣಿ ದೇವಿ ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ -ರೋಶನ್

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

2 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

2 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

2 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

2 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

2 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

7 hours ago