Latest

ಬಂಗಾರಪೇಟೆ ತಾಲೂಕಿನ ಎನ್. ಗಾಯತ್ರಿ ರವರು 25ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ.

ಕರ್ನಾಟಕಕ್ಕೆ 4ನೇ ಶ್ರೇಣಿ ಪಡೆದು ಎನ್ .ಗಾಯತ್ರಿ ರವರು  ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ತಳವರ್ಗ ಕಡು ಬಡತನದ ಹಿನ್ನಲೆಯಿಂದ ಬಂದ ಎನ್. ಗಾಯತ್ರಿ ರವರು ಆಯ್ಕೆಯಾಗಿದ್ದಾರೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾರಹಳ್ಳಿ ಗ್ರಾಮದ ಎನ್. ಗಾಯತ್ರಿ ರವರು 2021ರಲ್ಲಿ ತಮ್ಮ ಕಾನೂನು ಪದವಿ ಪಡೆದು ತಾವು ಕಂಡ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅತ್ಯಂತ ತಳಸಮುದಾಯ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಎನ್. ಗಾಯತ್ರಿ ರವರು ಬಂಗಾರಪೇಟೆ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು ನಂತರ ಕೆ.ಜಿ.ಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಕರ್ನಾಟಕಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ.
ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ ಅವರ ಏಕೈಕ ಪುತ್ರಿ ಮೂವರು ಸಹೋದರರಿದ್ದಾರೆ. ತೀರಾ ಬಡತನದಲ್ಲಿ ಬೆಳೆದ ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ ಕಾಳಜಿ, ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು. ಇದೀಗ ಯಶಸ್ವಿಯಾಗಿದ್ದು, ತಂದೆ, ತಾಯಿ, ಸಹಪಾಠಿಗಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವ ಗಾಯತ್ರಿ ಅವರು, “ಎರಡನೇ ಪ್ರಯತ್ನದಲ್ಲಿ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ ನನಗಿಂತ ನಮ್ಮ ಕುಟುಂಬಸ್ಥರು ಹೆಚ್ಚು ಖುಷಿಯಾಗಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಸ್ಫೂರ್ತಿ.

“ನಮ್ಮಮನೆಯಲ್ಲಿ ಉನ್ನತ ಶಿಕ್ಷಣ ಪಡೆದ ಮೊದಲ ಮಹಿಳೆ ನಾನು, ಸರ್ಕಾರಿ ನೌಕರಿ ಪಡೆದುಕೊಂಡದ್ದು, ಅದರಲ್ಲೂ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದರಲ್ಲಿ ಮೊದಲಿಗಳು. ತಳ ಸಮುದಾಯಗಳ ತಲ್ಲಣಗಳಿಗೆ ಮಿಡಿಯಲು ಪ್ರಯತ್ನಿಸುತ್ತೇನೆ. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನನ್ನ ಮಿತಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ. ನನ್ನೆಲ್ಲ ಸಾಧನೆಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸ್ಫೂರ್ತಿಯಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವೆ” ಎಂದು ಹೇಳಿದರು.
ವರದಿ – ರೋಶನ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

21 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

21 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

21 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

21 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

21 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

21 hours ago