Latest

ಬಂಗಾರಪೇಟೆ ತಾಲೂಕಿನ ಎನ್. ಗಾಯತ್ರಿ ರವರು 25ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ.

ಕರ್ನಾಟಕಕ್ಕೆ 4ನೇ ಶ್ರೇಣಿ ಪಡೆದು ಎನ್ .ಗಾಯತ್ರಿ ರವರು  ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ತಳವರ್ಗ ಕಡು ಬಡತನದ ಹಿನ್ನಲೆಯಿಂದ ಬಂದ ಎನ್. ಗಾಯತ್ರಿ ರವರು ಆಯ್ಕೆಯಾಗಿದ್ದಾರೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾರಹಳ್ಳಿ ಗ್ರಾಮದ ಎನ್. ಗಾಯತ್ರಿ ರವರು 2021ರಲ್ಲಿ ತಮ್ಮ ಕಾನೂನು ಪದವಿ ಪಡೆದು ತಾವು ಕಂಡ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅತ್ಯಂತ ತಳಸಮುದಾಯ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಎನ್. ಗಾಯತ್ರಿ ರವರು ಬಂಗಾರಪೇಟೆ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು ನಂತರ ಕೆ.ಜಿ.ಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಕರ್ನಾಟಕಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ.
ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ ಅವರ ಏಕೈಕ ಪುತ್ರಿ ಮೂವರು ಸಹೋದರರಿದ್ದಾರೆ. ತೀರಾ ಬಡತನದಲ್ಲಿ ಬೆಳೆದ ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ ಕಾಳಜಿ, ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು. ಇದೀಗ ಯಶಸ್ವಿಯಾಗಿದ್ದು, ತಂದೆ, ತಾಯಿ, ಸಹಪಾಠಿಗಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವ ಗಾಯತ್ರಿ ಅವರು, “ಎರಡನೇ ಪ್ರಯತ್ನದಲ್ಲಿ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ ನನಗಿಂತ ನಮ್ಮ ಕುಟುಂಬಸ್ಥರು ಹೆಚ್ಚು ಖುಷಿಯಾಗಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಸ್ಫೂರ್ತಿ.

“ನಮ್ಮಮನೆಯಲ್ಲಿ ಉನ್ನತ ಶಿಕ್ಷಣ ಪಡೆದ ಮೊದಲ ಮಹಿಳೆ ನಾನು, ಸರ್ಕಾರಿ ನೌಕರಿ ಪಡೆದುಕೊಂಡದ್ದು, ಅದರಲ್ಲೂ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದರಲ್ಲಿ ಮೊದಲಿಗಳು. ತಳ ಸಮುದಾಯಗಳ ತಲ್ಲಣಗಳಿಗೆ ಮಿಡಿಯಲು ಪ್ರಯತ್ನಿಸುತ್ತೇನೆ. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನನ್ನ ಮಿತಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ. ನನ್ನೆಲ್ಲ ಸಾಧನೆಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸ್ಫೂರ್ತಿಯಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವೆ” ಎಂದು ಹೇಳಿದರು.
ವರದಿ – ರೋಶನ್

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

4 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

4 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

10 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

10 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

10 hours ago